ಚಿತ್ರದುರ್ಗ: 2019ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದ್ದಾರೆ.
ಚಿತ್ರದುರ್ಗದಲ್ಲಿ ಬಿಜೆಪಿಯ ವಿಜಯ್ ಸಂಕಲ್ಪ ರ್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕನ್ನಡದಲ್ಲಿ ಭಾಷಣ ಆರಂಭಿಸುವ ಮೂಲಕ ಜನರ ಮನಗೆದ್ದರು. ಜನತೆಗೆ ಕನ್ನಡದಲ್ಲೇ ಯುಗಾದಿ ಹಬ್ಬದ ಶುಭಾಶಯ ತಿಳಿಸಿದ ಮೋದಿ, ಲಿಂಗೈಕ್ಯ ಡಾ. ಶಿವಕುಮಾರ್ ಸ್ವಾಮಿಜೀ ಅವರನ್ನು ನೆನೆದು ಭಾಷಣ ಆರಂಭಿಸಿದರು.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಕಾರ್ಯವೈಖರಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಮೋದಿ, ಮೈತ್ರಿ ಸರ್ಕಾರ ಭ್ರಷ್ಟಾಚಾರ, ಕುಟುಂಬ ಹಿತಾಸಕ್ತಿಯಲ್ಲಿ ಮುಳುಗಿ ಹೋಗಿದ್ದು, ರಾಜ್ಯದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಆರೋಪಿಸಿದರು.
ಜನಾದೇಶವನ್ನು ಧಿಕ್ಕರಿಸಿ ರಚನೆಯಾದ ರಾಜ್ಯ ಮೈತ್ರಿ ಸರ್ಕಾರ ರಾಜ್ಯದ ಜನೆತೆಗೆ ಮೋಸ ಮಾಡಿದೆ ಎಂದು ಮೋದಿ ಹರಿಹಾಯ್ದರು. ರೈತರ ಸಾಲಮನ್ನಾ ನಾಟಕವಾಡುತ್ತಾ ಕುಟುಂಬದ ಖಜಾನೆ ತುಂಬಿಸಿಕೊಳ್ಳುತ್ತಿರುವ ನಾಯಕರು, ರಾಜ್ಯಕ್ಕೆ ಕೇಂದ್ರ ಸರ್ಕಾರ ನೀಡಿದ ಅನುದಾನವನ್ನು ಕೊಳ್ಳೆ ಹೊಡೆಯುವಲ್ಲಿ ನಿರತರಾಗಿದ್ದಾರೆ ಎಂದು ಪ್ರಧಾನಿ ಗಂಭೀರ ಆರೋಪ ಮಾಡಿದರು.
ಇತ್ತೀಚೆಗೆ ನಡೆದ ಐಟಿ ದಾಳಿ ಕುರಿತು ಪರೋಕ್ಷವಾಗಿ ಪ್ರಸ್ತಾಪಿಸಿದ ಪ್ರಧಾನಿ ಮೋದಿ, ತಮ್ಮ ಭ್ರಷ್ಟಾಚಾರವನ್ನು ಮರೆಮಾಚಲು ಸಿಎಂ ಆದಿಯಾಗಿ ಮೈತ್ರಿ ಸರ್ಕಾರದ ನಾಯಕರು ಪ್ರತಿಭಟನೆ ಮಾಡಿದ್ದು ನಾಚಿಕೆಗೇಡು ಎಂದು ಕಿಡಿಕಾರಿದರು.
ಕಾಂಗ್ರೆಸ್ ದೇಶದ ಅಖಂಡತೆಗೆ ಅಪಾಯಕಾರಿಯಾಗಿದ್ದು, ಇಂತಹ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡಿರುವ ಜೆಡಿಎಸ್ ರಾಜ್ಯ ಮತ್ತು ದೇಶದ ಜನತೆಗೆ ಮೋಸ ಮಾಡಿದೆ ಎಂದು ಮೋದಿ ಆರೋಪಿಸಿದರು.
ಶೀಘ್ರದಲ್ಲೇ ಮೈತ್ರಿ ಸರ್ಕಾರಕ್ಕೆ ಆಮ್ಲಜನಕ(ಹಣ)ದ ಪೂರೈಕೆ ಸ್ಥಗಿತಗೊಳ್ಳಲಿದ್ದು, ದೇಶದ ಅಭಿವೃದ್ಧಿ ಆಂದೋಲನದಲ್ಲಿ ಕರ್ನಾಟಕ ಮಹತ್ವದ ಪಾಲುದಾರ ರಾಜ್ಯವಾಗಿ ಹೊರ ಹೊಮ್ಮಲಿದೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದರು.
ಇದೇ ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಯುವ ಮತದಾರರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಸದೃಢ ಕರ್ನಾಟಕ, ಸದೃಢ ಭಾರತಕ್ಕಾಗಿ ಮತ ಚಲಾಯಿಸಿ ಎಂದು ಮನವಿ ಮಾಡಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…