ಚಿತ್ರದುರ್ಗ: 2019ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದ್ದಾರೆ.
ಚಿತ್ರದುರ್ಗದಲ್ಲಿ ಬಿಜೆಪಿಯ ವಿಜಯ್ ಸಂಕಲ್ಪ ರ್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕನ್ನಡದಲ್ಲಿ ಭಾಷಣ ಆರಂಭಿಸುವ ಮೂಲಕ ಜನರ ಮನಗೆದ್ದರು. ಜನತೆಗೆ ಕನ್ನಡದಲ್ಲೇ ಯುಗಾದಿ ಹಬ್ಬದ ಶುಭಾಶಯ ತಿಳಿಸಿದ ಮೋದಿ, ಲಿಂಗೈಕ್ಯ ಡಾ. ಶಿವಕುಮಾರ್ ಸ್ವಾಮಿಜೀ ಅವರನ್ನು ನೆನೆದು ಭಾಷಣ ಆರಂಭಿಸಿದರು.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಕಾರ್ಯವೈಖರಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಮೋದಿ, ಮೈತ್ರಿ ಸರ್ಕಾರ ಭ್ರಷ್ಟಾಚಾರ, ಕುಟುಂಬ ಹಿತಾಸಕ್ತಿಯಲ್ಲಿ ಮುಳುಗಿ ಹೋಗಿದ್ದು, ರಾಜ್ಯದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಆರೋಪಿಸಿದರು.
ಜನಾದೇಶವನ್ನು ಧಿಕ್ಕರಿಸಿ ರಚನೆಯಾದ ರಾಜ್ಯ ಮೈತ್ರಿ ಸರ್ಕಾರ ರಾಜ್ಯದ ಜನೆತೆಗೆ ಮೋಸ ಮಾಡಿದೆ ಎಂದು ಮೋದಿ ಹರಿಹಾಯ್ದರು. ರೈತರ ಸಾಲಮನ್ನಾ ನಾಟಕವಾಡುತ್ತಾ ಕುಟುಂಬದ ಖಜಾನೆ ತುಂಬಿಸಿಕೊಳ್ಳುತ್ತಿರುವ ನಾಯಕರು, ರಾಜ್ಯಕ್ಕೆ ಕೇಂದ್ರ ಸರ್ಕಾರ ನೀಡಿದ ಅನುದಾನವನ್ನು ಕೊಳ್ಳೆ ಹೊಡೆಯುವಲ್ಲಿ ನಿರತರಾಗಿದ್ದಾರೆ ಎಂದು ಪ್ರಧಾನಿ ಗಂಭೀರ ಆರೋಪ ಮಾಡಿದರು.
ಇತ್ತೀಚೆಗೆ ನಡೆದ ಐಟಿ ದಾಳಿ ಕುರಿತು ಪರೋಕ್ಷವಾಗಿ ಪ್ರಸ್ತಾಪಿಸಿದ ಪ್ರಧಾನಿ ಮೋದಿ, ತಮ್ಮ ಭ್ರಷ್ಟಾಚಾರವನ್ನು ಮರೆಮಾಚಲು ಸಿಎಂ ಆದಿಯಾಗಿ ಮೈತ್ರಿ ಸರ್ಕಾರದ ನಾಯಕರು ಪ್ರತಿಭಟನೆ ಮಾಡಿದ್ದು ನಾಚಿಕೆಗೇಡು ಎಂದು ಕಿಡಿಕಾರಿದರು.
ಕಾಂಗ್ರೆಸ್ ದೇಶದ ಅಖಂಡತೆಗೆ ಅಪಾಯಕಾರಿಯಾಗಿದ್ದು, ಇಂತಹ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡಿರುವ ಜೆಡಿಎಸ್ ರಾಜ್ಯ ಮತ್ತು ದೇಶದ ಜನತೆಗೆ ಮೋಸ ಮಾಡಿದೆ ಎಂದು ಮೋದಿ ಆರೋಪಿಸಿದರು.
ಶೀಘ್ರದಲ್ಲೇ ಮೈತ್ರಿ ಸರ್ಕಾರಕ್ಕೆ ಆಮ್ಲಜನಕ(ಹಣ)ದ ಪೂರೈಕೆ ಸ್ಥಗಿತಗೊಳ್ಳಲಿದ್ದು, ದೇಶದ ಅಭಿವೃದ್ಧಿ ಆಂದೋಲನದಲ್ಲಿ ಕರ್ನಾಟಕ ಮಹತ್ವದ ಪಾಲುದಾರ ರಾಜ್ಯವಾಗಿ ಹೊರ ಹೊಮ್ಮಲಿದೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದರು.
ಇದೇ ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಯುವ ಮತದಾರರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಸದೃಢ ಕರ್ನಾಟಕ, ಸದೃಢ ಭಾರತಕ್ಕಾಗಿ ಮತ ಚಲಾಯಿಸಿ ಎಂದು ಮನವಿ ಮಾಡಿದರು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…