ಅಯೋಧ್ಯೆ : ಅಯೋಧ್ಯೆಯಲ್ಲಿ ರಾಮ ದೇವಾಲಯವನ್ನು ನಿರ್ಮಿಸಲು ಕಲ್ಲುಗಳನ್ನು ಮಾತ್ರ ಬಳಸಲಾಗುವುದು ಮತ್ತು ಇದು 1,000 ವರ್ಷಗಳಿಗೂ ಹೆಚ್ಚು ಕಾಲ ಬಾಳಿಕೆ ಬರುತ್ತದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಬುಧವಾರ ಹೇಳಿದ್ದಾರೆ.
ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಯ ಹಿರಿಯ ಕಾರ್ಯಕಾರಿಯೂ ಆಗಿರುವ ರಾಯ್, ಐಐಟಿ-ಚೆನ್ನೈ ಮತ್ತು ಕೇಂದ್ರ ಕಟ್ಟಡ ಸಂಶೋಧನಾ ಸಂಸ್ಥೆ (ಸಿಬಿಆರ್ಐ) ಯಿಂದ ದೇಶದ ಅತ್ಯುತ್ತಮ ದೇವಾಲಯದ ನಿರ್ಮಾಣ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿವೆ ಎಂದು ಹೇಳಿದರು.
ದೇವಾಲಯದ ನಿರ್ಮಾಣವನ್ನು ಲಾರ್ಸೆನ್ ಮತ್ತು ಟೌಬ್ರೊ ನೋಡಿಕೊಳ್ಳಲಿದ್ದು, ಐಐಟಿ ಚೆನ್ನೈಯನ್ನು ಮಣ್ಣಿನ ಗಟ್ಟಿತನದ ಪರೀಕ್ಷೆಗೆ ಮತ್ತು ಸಿಬಿಆರ್ ಸೇವೆಯನ್ನು ಮಂದಿರದ ಕಟ್ಟಡ ಭೂಕಂಪವನ್ನು ತಡೆದುಕೊಳ್ಳುವ ಶಕ್ತಿ ಹೊಂದಿರುತ್ತದೆಯೇ ಎಂದು ಪರೀಕ್ಷಿಸಲು ಬಳಸಿಕೊಳ್ಳಲಾಗುವುದು ಎಂದು ಸುದ್ದಿಗಾರರಿಗೆ ಚಂಪತ್ ರೈ ತಿಳಿಸಿದರು.
ದೇವಾಲಯವನ್ನು ನಿರ್ಮಿಸಲು ಸುಮಾರು 10,000 ತಾಮ್ರದ ಸಲಾಕೆಗಳು ಬೇಕಾಗುತ್ತವೆ. ಜನರು ನಿರ್ಮಾಣ ಪ್ರಕ್ರಿಯೆಯ ಭಾಗವಾಗಲು ಬಯಸುವ ಕಾರಣ, ಅವರು ತಾಮ್ರವನ್ನು ದಾನ ಮಾಡುವ ಮೂಲಕ ಮಾಡಬಹುದು ಎಂದು ರೈ ಹೇಳಿದರು.
ಕಲ್ಲುಗಳನ್ನು ಮಾತ್ರ ಬಳಸಿದರೆ ಮಂದಿರ ಗಾಳಿ, ಬೆಳಕು, ನೀರಿಗೆ ಹಾಳಾಗುವುದಿಲ್ಲ ಮತ್ತು ಸಾವಿರಕ್ಕೂ ಹೆಚ್ಚು ವರ್ಷ ಕಾಲ ಬಾಳುತ್ತದೆ ಎಂದು ಚಂಪತ್ ರೈ ಹೇಳುತ್ತಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…