ಅಯೋಧ್ಯೆ : ಅಯೋಧ್ಯೆಯಲ್ಲಿ ರಾಮ ದೇವಾಲಯವನ್ನು ನಿರ್ಮಿಸಲು ಕಲ್ಲುಗಳನ್ನು ಮಾತ್ರ ಬಳಸಲಾಗುವುದು ಮತ್ತು ಇದು 1,000 ವರ್ಷಗಳಿಗೂ ಹೆಚ್ಚು ಕಾಲ ಬಾಳಿಕೆ ಬರುತ್ತದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಬುಧವಾರ ಹೇಳಿದ್ದಾರೆ.
ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಯ ಹಿರಿಯ ಕಾರ್ಯಕಾರಿಯೂ ಆಗಿರುವ ರಾಯ್, ಐಐಟಿ-ಚೆನ್ನೈ ಮತ್ತು ಕೇಂದ್ರ ಕಟ್ಟಡ ಸಂಶೋಧನಾ ಸಂಸ್ಥೆ (ಸಿಬಿಆರ್ಐ) ಯಿಂದ ದೇಶದ ಅತ್ಯುತ್ತಮ ದೇವಾಲಯದ ನಿರ್ಮಾಣ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿವೆ ಎಂದು ಹೇಳಿದರು.
ದೇವಾಲಯದ ನಿರ್ಮಾಣವನ್ನು ಲಾರ್ಸೆನ್ ಮತ್ತು ಟೌಬ್ರೊ ನೋಡಿಕೊಳ್ಳಲಿದ್ದು, ಐಐಟಿ ಚೆನ್ನೈಯನ್ನು ಮಣ್ಣಿನ ಗಟ್ಟಿತನದ ಪರೀಕ್ಷೆಗೆ ಮತ್ತು ಸಿಬಿಆರ್ ಸೇವೆಯನ್ನು ಮಂದಿರದ ಕಟ್ಟಡ ಭೂಕಂಪವನ್ನು ತಡೆದುಕೊಳ್ಳುವ ಶಕ್ತಿ ಹೊಂದಿರುತ್ತದೆಯೇ ಎಂದು ಪರೀಕ್ಷಿಸಲು ಬಳಸಿಕೊಳ್ಳಲಾಗುವುದು ಎಂದು ಸುದ್ದಿಗಾರರಿಗೆ ಚಂಪತ್ ರೈ ತಿಳಿಸಿದರು.
ದೇವಾಲಯವನ್ನು ನಿರ್ಮಿಸಲು ಸುಮಾರು 10,000 ತಾಮ್ರದ ಸಲಾಕೆಗಳು ಬೇಕಾಗುತ್ತವೆ. ಜನರು ನಿರ್ಮಾಣ ಪ್ರಕ್ರಿಯೆಯ ಭಾಗವಾಗಲು ಬಯಸುವ ಕಾರಣ, ಅವರು ತಾಮ್ರವನ್ನು ದಾನ ಮಾಡುವ ಮೂಲಕ ಮಾಡಬಹುದು ಎಂದು ರೈ ಹೇಳಿದರು.
ಕಲ್ಲುಗಳನ್ನು ಮಾತ್ರ ಬಳಸಿದರೆ ಮಂದಿರ ಗಾಳಿ, ಬೆಳಕು, ನೀರಿಗೆ ಹಾಳಾಗುವುದಿಲ್ಲ ಮತ್ತು ಸಾವಿರಕ್ಕೂ ಹೆಚ್ಚು ವರ್ಷ ಕಾಲ ಬಾಳುತ್ತದೆ ಎಂದು ಚಂಪತ್ ರೈ ಹೇಳುತ್ತಾರೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…