ಮೈಸೂರು: ಮುಸ್ಲಿಮರ ಮನಸ್ಥಿತಿ ಬದಲಾಗಬೇಕಿದೆ. ಭಾರತದ ಮುಸ್ಲಿಮರನ್ನು ಮೆಕ್ಕಾ ಮದೀನಾದಿಂದ ಕರೆತಂದಿಲ್ಲ. ಮುಸ್ಲಿಮರಲ್ಲೂ ನಮ್ಮ ಡಿಎನ್ಎ ಇರುವುದು, ಅವರಲ್ಲೂ ನಮ್ಮದೇ ರಕ್ತ ಹರಿಯುತ್ತಿದೆ. ಕಲ್ಲು ತೂರುವ ಸಂಸ್ಕೃತಿ ಬಿಡಬೇಕು. ಇಲ್ಲದಿದ್ದರೆ ಕಲ್ಲು ತೂರುವವರ ಬಳಿಗೆ ಬುಲ್ಡೋಜರ್ ಬರಲಿದೆ. ಉತ್ತರ ಪ್ರದೇಶದಲ್ಲಿ ಇರುವಂತೆ ಇಲ್ಲಿಯೂ ಆಗಲಿದೆ ಎಂದು ಸಂಸದ ಪ್ರತಾಪ್ ಸಿಂಹ ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ, ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಸೇರಿದಂತೆ ರಾಜ್ಯದ ವಿವಿಧೆಡೆ ಸಂಭವಿಸಿದ ಗಲಭೆಗಳಲ್ಲಿ ಮುಸ್ಲಿಮರ ಮನಸ್ಥಿತಿ ಹೇಗಿದೆ ಎಂದು ಗೊತ್ತಾಗಿದೆ. ಮುಸ್ಲಿಮರ ಮೆರವಣಿಗೆ ಮೇಲೆ ಹಿಂದೂಗಳು ಎಂದೂ ಕೂಡ ಕಲ್ಲು ತೂರಾಟ ನಡೆಸಿಲ್ಲ. ಆದರೆ ಹಿಂದೂಗಳ ಮೆರವಣಿಗೆ ಮೇಲೆ ಮುಸ್ಲಿಮರಿಂದ ಕಲ್ಲು ತೂರಾಟ ನಡೆಸಲಾಗಿದೆ. ಈ ವಿಚಾರದಲ್ಲಿ ಮುಸ್ಲಿಮರ ಮನಸ್ಥಿತಿ ಬದಲಾಗಬೇಕು ಎಂದರು.
ಕಲ್ಲು ಹೊಡೆಯುವುದು ಮುಸ್ಲಿಮರ ಸಂಸ್ಕೃತಿಯಾಗಿದೆ. ಕ್ರಿಶ್ಚಿಯನ್, ಪಾರ್ಸಿಗಳು ಸೇರಿದಂತೆ ಯಾವುದೇ ಧರ್ಮೀಯರು ಕಲ್ಲು ತೂರುವುದಿಲ್ಲ. ಮುಸ್ಲಿಮರು ಮಾತ್ರ ಅನ್ಯ ಧರ್ಮೀಯರ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದಾರೆ. ಹಿಜಾಬ್ ವಿಚಾರದಲ್ಲಿ ನ್ಯಾಯಾಲಯದ ಆದೇಶವನ್ನು ಧಿಕ್ಕರಿಸಿ ಅಂಗಡಿ ಮುಗ್ಗಟ್ಟನ್ನು ಬಂದ್ ಮಾಡಿದ್ದರಿಂದ ಸಮಸ್ಯೆ ಆರಂಭವಾಯಿತು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…