ಚಿಕ್ಕಮಗಳೂರು: ಮಗನ ಸಾವಿನಿಂದ ಮನನೊಂದ ತಾಯಿ, ಮೃತದೇಹ ಸಿಗುವ ಮುನ್ನವೇ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ ನಡೆದಿದೆ.
ಮೃತರನ್ನ ರವಿಕಲಾ (48) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಭದ್ರಾ ನದಿಗೆ ಬಿದ್ದ ಪರಿಣಾಮ ರವಿಕಲಾ ಪುತ್ರ ಶಮಂತ್ (23) ಸಾವನ್ನಪ್ಪಿದ್ದ.
ಮಲೆನಾಡಲ್ಲಿ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಪಿಕಪ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯೊಡೆದು ಪಕ್ಕದಲ್ಲೇ ಹರಿಯುತ್ತಿದ್ದ ಭದ್ರಾ ನದಿಗೆ ಉರುಳಿ ಬಿದ್ದು ಶಮಂತ್ ಸಾವನ್ನಪ್ಪಿದ್ದ. ಶಮಂತ್ ಪಿಕಪ್ನಲ್ಲಿ ಕಾಫಿ ತೋಟಕ್ಕೆ ಕಾರ್ಮಿಕರ ಟ್ರಿಪ್ ಹೊಡೆಯುತ್ತಿದ್ದ. ಗುರುವಾರ ಸಂಜೆ ಬಾಡಿಗೆ ಇದೆ ಎಂದು ಕಳಸಕ್ಕೆ ಬಂದು ವಾಪಸ್ ಗ್ರಾಮಕ್ಕೆ ಹೋಗುವಾಗ ಈ ಅವಘಡ ಸಂಭವಿಸಿತ್ತು.
ನಿರಂತರ ಮಳೆ ಸುರಿಯುತ್ತಿದ್ದರಿಂದ ಭದ್ರಾ ನದಿಯಿಂದ ಜೀಪ್ ಮೇಲೆತ್ತುವ ಕಾರ್ಯಾಚರಣೆಗೂ ತೊಂದರೆಯಾಗಿತ್ತು. ಭದ್ರಾ ನದಿ ಬಳಿ ಬಂದಿದ್ದ ಶಮಂತ್ ತಾಯಿ ಮಗನ ನೆನೆದು ಕಣ್ಣೀರಿಟ್ಟಿದ್ದರು. ಆದರೆ, ಮಗನ ಮೃತದೇಹ ಸಿಗುವ ಮುನ್ನವೇ ರಾತ್ರಿ ವೇಳೆ ಮನೆಯ ಹಿಂದಿನ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]