Featured

ಕಳಸ : ಪಿಕಪ್ ಸಮೇತ ನದಿಗೆ ಬಿದ್ದು ಪುತ್ರ ನಾಪತ್ತೆ: ಮನನೊಂದ ತಾಯಿ ಆತ್ಮಹತ್ಯೆ – vishwanews24

ಕಳಸ : ಪಿಕಪ್ ಸಮೇತ ನದಿಗೆ ಬಿದ್ದು ಪುತ್ರ ನಾಪತ್ತೆ: ಮನನೊಂದ ತಾಯಿ ಆತ್ಮಹತ್ಯೆ

ಚಿಕ್ಕಮಗಳೂರು: ಮಗನ ಸಾವಿನಿಂದ ಮನನೊಂದ ತಾಯಿ, ಮೃತದೇಹ ಸಿಗುವ ಮುನ್ನವೇ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು  ಜಿಲ್ಲೆಯ ಕಳಸ  ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ ನಡೆದಿದೆ.

ಮೃತರನ್ನ ರವಿಕಲಾ (48) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಭದ್ರಾ ನದಿಗೆ ಬಿದ್ದ ಪರಿಣಾಮ ರವಿಕಲಾ ಪುತ್ರ ಶಮಂತ್ (23) ಸಾವನ್ನಪ್ಪಿದ್ದ.

ಮಲೆನಾಡಲ್ಲಿ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಪಿಕಪ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯೊಡೆದು ಪಕ್ಕದಲ್ಲೇ ಹರಿಯುತ್ತಿದ್ದ ಭದ್ರಾ ನದಿಗೆ  ಉರುಳಿ ಬಿದ್ದು ಶಮಂತ್ ಸಾವನ್ನಪ್ಪಿದ್ದ. ಶಮಂತ್ ಪಿಕಪ್‌ನಲ್ಲಿ ಕಾಫಿ ತೋಟಕ್ಕೆ ಕಾರ್ಮಿಕರ ಟ್ರಿಪ್ ಹೊಡೆಯುತ್ತಿದ್ದ. ಗುರುವಾರ ಸಂಜೆ ಬಾಡಿಗೆ ಇದೆ ಎಂದು ಕಳಸಕ್ಕೆ ಬಂದು ವಾಪಸ್ ಗ್ರಾಮಕ್ಕೆ ಹೋಗುವಾಗ ಈ ಅವಘಡ ಸಂಭವಿಸಿತ್ತು.

ನಿರಂತರ ಮಳೆ ಸುರಿಯುತ್ತಿದ್ದರಿಂದ ಭದ್ರಾ ನದಿಯಿಂದ ಜೀಪ್ ಮೇಲೆತ್ತುವ ಕಾರ್ಯಾಚರಣೆಗೂ ತೊಂದರೆಯಾಗಿತ್ತು. ಭದ್ರಾ ನದಿ ಬಳಿ ಬಂದಿದ್ದ ಶಮಂತ್ ತಾಯಿ ಮಗನ ನೆನೆದು ಕಣ್ಣೀರಿಟ್ಟಿದ್ದರು. ಆದರೆ, ಮಗನ ಮೃತದೇಹ ಸಿಗುವ ಮುನ್ನವೇ ರಾತ್ರಿ ವೇಳೆ ಮನೆಯ ಹಿಂದಿನ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

13 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

16 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

17 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

17 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

17 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

17 hours ago