Featured

ಕಳಸ : ಪಿಕಪ್ ಸಮೇತ ನದಿಗೆ ಬಿದ್ದು ಪುತ್ರ ನಾಪತ್ತೆ: ಮನನೊಂದ ತಾಯಿ ಆತ್ಮಹತ್ಯೆ – vishwanews24

ಕಳಸ : ಪಿಕಪ್ ಸಮೇತ ನದಿಗೆ ಬಿದ್ದು ಪುತ್ರ ನಾಪತ್ತೆ: ಮನನೊಂದ ತಾಯಿ ಆತ್ಮಹತ್ಯೆ

ಚಿಕ್ಕಮಗಳೂರು: ಮಗನ ಸಾವಿನಿಂದ ಮನನೊಂದ ತಾಯಿ, ಮೃತದೇಹ ಸಿಗುವ ಮುನ್ನವೇ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು  ಜಿಲ್ಲೆಯ ಕಳಸ  ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ ನಡೆದಿದೆ.

ಮೃತರನ್ನ ರವಿಕಲಾ (48) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಭದ್ರಾ ನದಿಗೆ ಬಿದ್ದ ಪರಿಣಾಮ ರವಿಕಲಾ ಪುತ್ರ ಶಮಂತ್ (23) ಸಾವನ್ನಪ್ಪಿದ್ದ.

ಮಲೆನಾಡಲ್ಲಿ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಪಿಕಪ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯೊಡೆದು ಪಕ್ಕದಲ್ಲೇ ಹರಿಯುತ್ತಿದ್ದ ಭದ್ರಾ ನದಿಗೆ  ಉರುಳಿ ಬಿದ್ದು ಶಮಂತ್ ಸಾವನ್ನಪ್ಪಿದ್ದ. ಶಮಂತ್ ಪಿಕಪ್‌ನಲ್ಲಿ ಕಾಫಿ ತೋಟಕ್ಕೆ ಕಾರ್ಮಿಕರ ಟ್ರಿಪ್ ಹೊಡೆಯುತ್ತಿದ್ದ. ಗುರುವಾರ ಸಂಜೆ ಬಾಡಿಗೆ ಇದೆ ಎಂದು ಕಳಸಕ್ಕೆ ಬಂದು ವಾಪಸ್ ಗ್ರಾಮಕ್ಕೆ ಹೋಗುವಾಗ ಈ ಅವಘಡ ಸಂಭವಿಸಿತ್ತು.

ನಿರಂತರ ಮಳೆ ಸುರಿಯುತ್ತಿದ್ದರಿಂದ ಭದ್ರಾ ನದಿಯಿಂದ ಜೀಪ್ ಮೇಲೆತ್ತುವ ಕಾರ್ಯಾಚರಣೆಗೂ ತೊಂದರೆಯಾಗಿತ್ತು. ಭದ್ರಾ ನದಿ ಬಳಿ ಬಂದಿದ್ದ ಶಮಂತ್ ತಾಯಿ ಮಗನ ನೆನೆದು ಕಣ್ಣೀರಿಟ್ಟಿದ್ದರು. ಆದರೆ, ಮಗನ ಮೃತದೇಹ ಸಿಗುವ ಮುನ್ನವೇ ರಾತ್ರಿ ವೇಳೆ ಮನೆಯ ಹಿಂದಿನ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

3 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

3 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

3 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

3 days ago