ನವದೆಹಲಿ : ದೇಶಾದ್ಯಂತ ಯೂನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (ಯುಪಿಐ) ಬಳಕೆಯನ್ನು ಶ್ಲಾಘಿಸುತ್ತಾ, ಕಳೆದ ಏಳು ವರ್ಷಗಳಲ್ಲಿ ಭಾರತದಲ್ಲಿ ಡಿಜಿಟಲ್ ವಹಿವಾಟು 19 ಪಟ್ಟು ಹೆಚ್ಚಾಗಿದೆ ಎಂದು ಪ್ರಧಾನಿ ಶ್ಲಾಘಿಸಿದ್ದಾರೆ. ಯುಪಿಐ ಅತಿ ಕಡಿಮೆ ಅವಧಿಯಲ್ಲಿ ಭಾರತವನ್ನು “ಡಿಜಿಟಲ್ ವಹಿವಾಟುಗಳ ವಿಷಯದಲ್ಲಿ ವಿಶ್ವದ ಅಗ್ರಗಣ್ಯ ರಾಷ್ಟ್ರ” ವನ್ನಾಗಿ ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಕೇವಲ ಏಳು ವರ್ಷಗಳಲ್ಲಿ, ಭಾರತದಲ್ಲಿ ಡಿಜಿಟಲ್ ವಹಿವಾಟು ದೇಶದಲ್ಲಿ 19 ಪಟ್ಟು ಹೆಚ್ಚಾಗಿದೆ. ದೇಶದಲ್ಲಿ ಎಲ್ಲಿಯಾದರೂ ಇಂದು ನಮ್ಮ ಬ್ಯಾಂಕಿಂಗ್ ವ್ಯವಸ್ಥೆಯು 24 ಗಂಟೆಗಳು, 7 ದಿನಗಳು ಮತ್ತು 12 ತಿಂಗಳುಗಳು ಯಾವುದೇ ಸಮಯದಲ್ಲಿ ಕಾರ್ಯನಿರ್ವಹಿಸುತ್ತದೆ ಪ್ರಧಾನ ಮಂತ್ರಿ ತಿಳಿಸಿದ್ದಾರೆ.
6-7 ವರ್ಷಗಳ ಹಿಂದೆ ಬ್ಯಾಂಕಿಂಗ್, ಪಿಂಚಣಿ, ವಿಮೆ ಎಲ್ಲವೂ ‘ಭಾರತದಲ್ಲಿ ಎಕ್ಸ್ಕ್ಲೂಸಿವ್ ಕ್ಲಬ್’ ಎಂಬಂತೆ ಇತ್ತು. ದೇಶದ ಸಾಮಾನ್ಯ ನಾಗರಿಕರು, ಬಡ ಕುಟುಂಬಗಳು, ರೈತರು, ಸಣ್ಣ ವ್ಯಾಪಾರಿಗಳು-ಉದ್ಯಮಿಗಳು, ಮಹಿಳೆಯರು, ದಲಿತರು. -ವಂಚಿತರು-ಹಿಂದುಳಿದವರಿಗೆ ಈ ಎಲ್ಲಾ ಸೌಲಭ್ಯಗಳು ಅವರೆಲ್ಲರಿಗೂ ದೂರವಾಗಿದ್ದವು.”
ಈ ಹಿಂದೆ ಯಾವುದೇ ಬ್ಯಾಂಕ್ ಶಾಖೆಗಳು ಇರಲಿಲ್ಲ, ಸಿಬ್ಬಂದಿ ಇಲ್ಲ, ಇಂಟರ್ನೆಟ್ ಇಲ್ಲ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಜಾಗೃತಿ ಇರಲಿಲ್ಲ ಎಂದು ಪ್ರಧಾನಿ ತಿಳಿಸಿದರು.
”ಬಡವರಿಗೆ ಈ ಸೌಲಭ್ಯಗಳನ್ನು ತಲುಪಿಸುವ ಜವಾಬ್ದಾರಿ ಹೊತ್ತಿದ್ದ ಜನರೂ ಇತ್ತ ಗಮನಹರಿಸುತ್ತಿರಲಿಲ್ಲ .ಬದಲಾಗಿಯೂ ಬದಲಾಗದಿರುವುದಕ್ಕೆ ನಾನಾ ಸಬೂಬುಗಳನ್ನು ಹೇಳುತ್ತಿದ್ದರು. ಬ್ಯಾಂಕ್ ಶಾಖೆ ಇಲ್ಲ, ಸಿಬ್ಬಂದಿ ಇಲ್ಲ, ಇಂಟರ್ನೆಟ್ ಇಲ್ಲ, ಅರಿವು ಇಲ್ಲ ಹೀಗೆ ಕಾರಣಗಳಿದ್ದವು ಎಂದು ಪ್ರಧಾನಿ ಹೇಳಿದ್ದಾರೆ.
ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್ ಬೆಂಗಳೂರು: ಬ್ರೇಕ್ಫಾಸ್ಟ್ ಮೀಟಿಂಗ್ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್…
ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ : ಸಿದ್ದರಾಮಯ್ಯ ಬೆಂಗಳೂರು: ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ…
ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…
ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…