Featured

ಕಳೆದ ಕೆಲ ವರ್ಷಗಳಿಂದ ದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಂದ ಗಾಂಧೀಜಿ ಆತ್ಮ ನೊಂದಿರಬಹುದು: ಸೋನಿಯಾ ಗಾಂಧಿ -Vishwanews24

ನವದೆಹಲಿ: ಮಹಾತ್ಮಾ ಗಾಂಧಿ ಅವರ 150ನೇ ಜನ್ಮದಿನಾಚರಣೆ ಸಂದರ್ಭದಲ್ಲಿಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಳೆದ ಕೆಲ ವರ್ಷಗಳಲ್ಲಿ ದೇಶದಲ್ಲಿ ನಡೆದಿರುವ ಘಟನೆಗಳಿಂದ ಗಾಂಧೀಜಿ ಅವರ ಆತ್ಮ ನೊಂದಿರಬಹುದು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನವದೆಹಲಿಯ ರಾಜಘಾಟ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಗಾಂಧಿ ಸ್ವದೇಶ್ ಯಾತ್ರೆ’ಯಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಮತ್ತು ಗಾಂಧೀಜಿ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಆದರೆ, ಕೆಲವರಿಗೆ ಆರ್ ಎಸ್ ಎಸ್ ಬೇಕು, ಗಾಂಧೀಜಿ ಬೇಡ. ಇಂತಹ ಜನರು ಭಾರತ ವೈವಿದ್ಯಮಯ ಸಂಸ್ಕೃತಿಯನ್ನೊಳಗೊಂಡ ಸಮಾಜ ಹಾಗೂ ಗಾಂಧೀಜಿ ತತ್ವಗಳನ್ನು ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಎಂದು ಕಿಡಿಕಾರಿದರು.

ತಪ್ಪು ರಾಜಕೀಯದಾಟದಲ್ಲಿ ತೊಡಗಿರುವರು ಮಹಾತ್ಮಾ ಗಾಂಧಿ ಅವರ ಸಿದ್ಧಾಂತಕ್ಕೆ ಗೌರವ ತೋರುವುದಿಲ್ಲ. ಗಾಂಧೀಜಿ ಎಂದಿಗೂ ಸತ್ಯಕ್ಕೆ ಬದ್ಧರಾಗಿದ್ದರು. ಆದರೆ, ಈಗಿನ ರಾಜಕಾರಣಿಗಳು ತಮ್ಮನ್ನು ಮಹಾತ್ಮಾ ಗಾಂಧೀಜಿಯ ಸಿದ್ಧಾಂತಗಳಿಗಿಂತ ದೊಡ್ಡವರೆಂದು ಭಾವಿಸುತ್ತಾರೆ ಎಂದರು.

ಕಳೆದ ಕೆಲ ವರ್ಷಗಳಿಂದ ದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಂದ ಗಾಂಧೀಜಿ ಆತ್ಮ ನೊಂದಿರಬಹುದು. ಇಂದು ರೈತರು ಕಡುಬಡವರಾಗಿದ್ದು, ಯುವಕರು ಉದ್ಯೋಗಕ್ಕಾಗಿ ಅಲೆದಾಡುವಂತಾಗಿರುವುದು ದುರದೃಷ್ಟಕರ ಪರಿಸ್ಥಿತಿ ಎಂದರು.  ಗಾಂಧೀಜಿ ಅವರ ಹೆಸರನ್ನು ಉಲ್ಲೇಖಿಸುವುದು ಸುಲಭ. ಆದರೆ,ಅವರ ಸಿದ್ಧಾಂತಗಳನ್ನು ಪಾಲಿಸುವುದು ಕಷ್ಟ ಎಂದು ವ್ಯಂಗ್ಯವಾಡಿದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

24 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

24 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago