Featured

ಕಳೆದ ಮೂರುವರೆ ವರ್ಷಗಳಿಂದ ಬಿಜೆಪಿ ಸರ್ಕಾರ ನಮ್ಮ ರಾಜ್ಯಕ್ಕೆ ದೊಡ್ಡ ಕಳಂಕ ತಂದಿದೆ : ಡಿ.ಕೆ ಶಿ – VIshwanews24

ಕರ್ನಾಟಕ ರಾಜ್ಯದ ಬದಲಾವಣೆಗೆ ಇಂದು ನಾಂದಿ ಹಾಡುತ್ತಿದ್ದೇವೆ..

ಬೆಳಗಾವಿ: ಕರ್ನಾಟಕ ರಾಜ್ಯದ ಬದಲಾವಣೆಗೆ ಇಂದು ನಾಂದಿ ಹಾಡುತ್ತಿದ್ದೇವೆ ಎಂದು ಕಾಂಗ್ರೆಸ್  ಪ್ರಜಾಧ್ವನಿ ಬಸ್‌ಯಾತ್ರೆ ಚಾಲನೆಗೂ ಮುನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌  ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಯವರು ಬ್ರಿಟಿಷ್‌ರನ್ನು ಓಡಿಸಲು ಈ ನಾಡಿನಿಂದ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಸ್ವೀಕರಿಸಿ ಹೋರಾಡಿದ್ದರು. ಅದಾದ ಮೇಲೆ ಪ್ರಜಾಪ್ರಭುತ್ವ ಬಂದು ಅಭಿವೃದ್ಧಿಶೀಲ ರಾಷ್ಟ್ರವಾಗಿದೆ. ಕಳೆದ ಮೂರುವರೆ ವರ್ಷಗಳಿಂದ ಬಿಜೆಪಿ ಸರ್ಕಾರ ನಮ್ಮ ರಾಜ್ಯಕ್ಕೆ ದೊಡ್ಡ ಕಳಂಕ ತಂದಿದೆ. ಆ ಕಳಂಕ ನಿರ್ಮೂಲನೆ ಮಾಡಲು ಪ್ರಜೆಗಳ ಧ್ವನಿ ತಿಳಿಸಲು ಹೊರಟಿದ್ದೇವೆ ಎಂದು ತಿಳಿಸಿದರು.

ಐತಿಹಾಸಿಕವಾದ ಈ ಭೂಮಿಯಿಂದ ಪ್ರಜಾಧ್ವನಿ ಗ್ಯಾರಂಟಿ ಯಾತ್ರೆ ಆರಂಭವಾಗಿದೆ. ಈ ತಿಂಗಳು ಜಿಲ್ಲಾ ಕೇಂದ್ರಗಳನ್ನು ಮುಗಿಸಿ ಬಳಿಕ ಕ್ಷೇತ್ರವಾರು ಸಂಚಾರ ಮಾಡುತ್ತೇವೆ. ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸಂಚಾರ ಮಾಡುತ್ತೇವೆ. ಆಯಾ ಭಾಗಕ್ಕೆ ಹೋದಾಗ ಆಯಾ ನಾಯಕರು ಬರುತ್ತಾರೆ. 20 ಜಿಲ್ಲೆಗಳಲ್ಲಿ ನಾನು, ಸಿದ್ದರಾಮಯ್ಯ, ಹೆಚ್.ಕೆ.ಪಾಟೀಲ್ ಸೇರಿ ಹಿರಿಯ ನಾಯಕರು ಸಂಚರಿಸಿಸುತ್ತೇವೆ ಎಂದರು.

 

ಹೊಸಬರಿಗೆ ಕಾಂಗ್ರೆಸ್ ಟಿಕೆಟ್ ನೀಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಖಂಡಿತ ಹೊಸಬರಿಗೆ ಅವಕಾಶ ಕೊಡುತ್ತೇವೆ. ನವ ಕರ್ನಾಟಕಕ್ಕೆ ಕಾಂಗ್ರೆಸ್ ಸಂಕಲ್ಪ ಮಾಡುತ್ತಿದೆ. ಪಂಚಮಸಾಲಿ ಮೀಸಲಾತಿ ಬಗ್ಗೆ ಕೂಡಲಸಂಗಮ ಸ್ವಾಮೀಜಿ ಚೆನ್ನಾಗಿ ವಿಶ್ಲೇಷಿಸಿದ್ದಾರೆ. ತುಪ್ಪವನ್ನು ತಲೆ ಮೇಲೆ ಇಟ್ಟಿದ್ದಾರೆ ಎಂದು ಚೆನ್ನಾಗಿ ವಿಶ್ಲೇಷಣೆ ಮಾಡಿದ್ದಾರೆ. ಎಲ್ಲಾ ವರ್ಗಗಳನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.

Vishwa News 24

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ – vishwanews24

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ…

16 hours ago

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ – vishwanews24

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…

16 hours ago

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ – vishwanews24

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್‌ನ ಐಎಎಸ್…

17 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ – vishwanews24

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…

17 hours ago

ಮೇ 1 ರಿಂದ ಶಿವಮೊಗ್ಗ – ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ – vishwanews24

ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…

18 hours ago

ಬೆಳ್ತಂಗಡಿ: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತ್ಯು – vishwanews24

ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…

18 hours ago