ಬೆಳಗಾವಿ: ಕರ್ನಾಟಕ ರಾಜ್ಯದ ಬದಲಾವಣೆಗೆ ಇಂದು ನಾಂದಿ ಹಾಡುತ್ತಿದ್ದೇವೆ ಎಂದು ಕಾಂಗ್ರೆಸ್ ಪ್ರಜಾಧ್ವನಿ ಬಸ್ಯಾತ್ರೆ ಚಾಲನೆಗೂ ಮುನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಯವರು ಬ್ರಿಟಿಷ್ರನ್ನು ಓಡಿಸಲು ಈ ನಾಡಿನಿಂದ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಸ್ವೀಕರಿಸಿ ಹೋರಾಡಿದ್ದರು. ಅದಾದ ಮೇಲೆ ಪ್ರಜಾಪ್ರಭುತ್ವ ಬಂದು ಅಭಿವೃದ್ಧಿಶೀಲ ರಾಷ್ಟ್ರವಾಗಿದೆ. ಕಳೆದ ಮೂರುವರೆ ವರ್ಷಗಳಿಂದ ಬಿಜೆಪಿ ಸರ್ಕಾರ ನಮ್ಮ ರಾಜ್ಯಕ್ಕೆ ದೊಡ್ಡ ಕಳಂಕ ತಂದಿದೆ. ಆ ಕಳಂಕ ನಿರ್ಮೂಲನೆ ಮಾಡಲು ಪ್ರಜೆಗಳ ಧ್ವನಿ ತಿಳಿಸಲು ಹೊರಟಿದ್ದೇವೆ ಎಂದು ತಿಳಿಸಿದರು.
ಐತಿಹಾಸಿಕವಾದ ಈ ಭೂಮಿಯಿಂದ ಪ್ರಜಾಧ್ವನಿ ಗ್ಯಾರಂಟಿ ಯಾತ್ರೆ ಆರಂಭವಾಗಿದೆ. ಈ ತಿಂಗಳು ಜಿಲ್ಲಾ ಕೇಂದ್ರಗಳನ್ನು ಮುಗಿಸಿ ಬಳಿಕ ಕ್ಷೇತ್ರವಾರು ಸಂಚಾರ ಮಾಡುತ್ತೇವೆ. ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸಂಚಾರ ಮಾಡುತ್ತೇವೆ. ಆಯಾ ಭಾಗಕ್ಕೆ ಹೋದಾಗ ಆಯಾ ನಾಯಕರು ಬರುತ್ತಾರೆ. 20 ಜಿಲ್ಲೆಗಳಲ್ಲಿ ನಾನು, ಸಿದ್ದರಾಮಯ್ಯ, ಹೆಚ್.ಕೆ.ಪಾಟೀಲ್ ಸೇರಿ ಹಿರಿಯ ನಾಯಕರು ಸಂಚರಿಸಿಸುತ್ತೇವೆ ಎಂದರು.
ಹೊಸಬರಿಗೆ ಕಾಂಗ್ರೆಸ್ ಟಿಕೆಟ್ ನೀಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಖಂಡಿತ ಹೊಸಬರಿಗೆ ಅವಕಾಶ ಕೊಡುತ್ತೇವೆ. ನವ ಕರ್ನಾಟಕಕ್ಕೆ ಕಾಂಗ್ರೆಸ್ ಸಂಕಲ್ಪ ಮಾಡುತ್ತಿದೆ. ಪಂಚಮಸಾಲಿ ಮೀಸಲಾತಿ ಬಗ್ಗೆ ಕೂಡಲಸಂಗಮ ಸ್ವಾಮೀಜಿ ಚೆನ್ನಾಗಿ ವಿಶ್ಲೇಷಿಸಿದ್ದಾರೆ. ತುಪ್ಪವನ್ನು ತಲೆ ಮೇಲೆ ಇಟ್ಟಿದ್ದಾರೆ ಎಂದು ಚೆನ್ನಾಗಿ ವಿಶ್ಲೇಷಣೆ ಮಾಡಿದ್ದಾರೆ. ಎಲ್ಲಾ ವರ್ಗಗಳನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…