ಮಡಿಕೇರಿ: ಕಳೆದ ವರ್ಷ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಸಂತ್ರಸ್ತರಾದ ಕುಟುಂಬದವರಿಗೆ ಮನೆಗಳನ್ನು ಶೀಘ್ರ ಹಸ್ತಾಂತರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಸೂಚನೆ ನೀಡಿದ್ದಾರೆ.
ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಬುಧವಾರ ಪ್ರಕೃತಿ ವಿಕೋಪದಿಂದ ಉಂಟಾದ ನಷ್ಟ, ಪರಿಹಾರ ಮನೆಗಳ ಪ್ರಗತಿ ಮತ್ತಿತರ ಬಗ್ಗೆ ನಡೆದ ಸಭೆಯಲ್ಲಿ ಸಚಿವರು ಮಾತನಾಡಿದರು.
ಜುಲೈ, 31 ರೊಳಗೆ ಕರ್ಣಂಗೇರಿ ಮನೆಗಳನ್ನು ಹಸ್ತಾಂತರಿಸಬೇಕು. ಹಾಗೆಯೇ ಆಗಸ್ಟ್, 15 ರೊಳಗೆ ಮದೆನಾಡು ಗ್ರಾಮದ ಬಳಿ ನಿರ್ಮಿಸಲಾಗಿರುವ ಮನೆಗಳನ್ನು ಹಸ್ತಾಂತರಿಸಬೇಕು. ಉಳಿದಂತೆ ಜಂಬೂರಿನಲ್ಲಿ ನಿರ್ಮಾಣವಾಗುತ್ತಿರುವ ಮನೆಗಳನ್ನು ಸಾಧ್ಯವಾದಷ್ಟು ಶೀಘ್ರ ಪೂರ್ಣಗೊಳಿಸಿ ಹಸ್ತಾಂತರಿಸುವಂತೆ ಆರ್.ವಿ.ದೇಶಪಾಂಡೆ ಅವರು ನಿರ್ದೇಶನ ನೀಡಿದರು.
ಹಾಗೆಯೇ ಜಿಲ್ಲಾಧಿಕಾರಿ ಕಚೇರಿ, ಉಪ ವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿಗೆ ಮನೆಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಮತ್ತೊಮ್ಮೆ ಪರಿಶೀಲಿಸಿ ಅರ್ಹರಿಗೆ ಮನೆ ನೀಡಲು ಮುಂದಾಗಬೇಕು ಎಂದು ಅವರು ಹೇಳಿದರು.
ಈ ಬಗ್ಗೆ ಮಾಹಿತಿ ನೀಡಿದ ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಅವರು ಕಳೆದ ವರ್ಷದ ಪ್ರಕೃತಿ ವಿಕೋಪದಿಂದಾಗಿ 431 ಮನೆಗಳು ಪೂರ್ಣ ಹಾನಿಯಾಗಿದೆ. 405 ಮನೆಗಳು ಭಾಗಶಃ ಹಾನಿಯಾಗಿದ್ದು, ಒಟ್ಟು 770 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಅದರಲ್ಲಿ 431 ಮನೆಗಳನ್ನು ಪ್ರಥಮ ಹಂತದಲ್ಲಿ ನಿರ್ಮಿಸಲಾಗುತ್ತಿದ್ದು, ಪೂರ್ಣಗೊಳ್ಳುವ ಹಂತದಲ್ಲಿದೆ ಎಂದು ಅವರು ತಿಳಿಸಿದರು.
ಈ ಬಗ್ಗೆ ಮಾತನಾಡಿದ ಕಂದಾಯ ಸಚಿವರು ಸಂಪಾಜೆ ಮತ್ತು ಗಾಳಿಬೀಡುವಿನಲ್ಲಿ ಶೀಘ್ರವೇ ಮನೆ ನಿರ್ಮಾಣಕ್ಕೆ ಅಗತ್ಯ ಕ್ರಮಕೈಗೊಳ್ಳುವಂತೆ ಸೂಚಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…