Featured

ಕಳೆದ 10 ವರ್ಷಗಳಲ್ಲಿ ಪರಿಸ್ಥಿತಿ ಬದಲಾಗಿದೆ ; ಹಬ್ಬಗಳನ್ನು ಪೊಲೀಸ್ ಬಂದೋಬಸ್ತ್‌ನಲ್ಲಿ ಆಚರಿಸಬೇಕಿದೆ : ಪ್ರಿಯಾಂಕ್ ಖರ್ಗೆ – Vishwanews24

ಇಂದಿನ ದಿನಗಳಲ್ಲಿ ಹಬ್ಬಗಳನ್ನೂ ಪೊಲೀಸರ ಬಂದೋಬಸ್ತ್‌ನಲ್ಲಿ ಆಚರಿಸಬೇಕಾದ ಸ್ಥಿತಿ ಬಂದಿರುವುದು ದುರ್ದೈವ : ಪ್ರಿಯಾಂಕ್ ಖರ್ಗೆ

ಕಲಬುರಗಿ: ಇಂದಿನ ದಿನಗಳಲ್ಲಿ ಹಬ್ಬಗಳನ್ನೂ ಪೊಲೀಸರ ಬಂದೋಬಸ್ತ್‌ನಲ್ಲಿ ಆಚರಿಸಬೇಕಾದ ಸ್ಥಿತಿ ಬಂದಿರುವುದು ದುರ್ದೈವ. ಕಳೆದ 10 ವರ್ಷಗಳಿಂದ ಇಂತಹ ಪರಿಸ್ಥಿತಿ ಬಂದಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಲ್ಲೆ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ.

ಎಲ್ಲಾ ಧರ್ಮಗಳಲ್ಲೂ ಶಾಂತಿ ಕದಡುವವರು ಕೆಲವರು ಇರ್ತಾರೆ. ಕೆಲವರು ಅವರದ್ದೇ ಧರ್ಮ ಶ್ರೇಷ್ಠ ಅಂತಾ ಭಾವಿಸುತ್ತಾರೆ ಇದು ದುರ್ದೈವ. ನಾನು ಅದಮಾರ ಮಠದ ಶಾಲೆಯಲ್ಲಿ ಓದಿದ್ದೇನೆ. ಆಗ ನಮಗೆ ರಂಜಾನ್, ಗಣೇಶ್ ಹಬ್ಬ, ಕ್ರಿಸ್ಮಸ್, ರಾಮನವಮಿಗೆ ರಜೆ ಸಿಗ್ತಿತ್ತು. ರಂಜಾನ್, ರಾಮನವಮಿ ಅದ್ಧೂರಿಯಾಗಿ ಆಚರಣೆ ಮಾಡುತ್ತಿದ್ದರು ಎಂದು ಸ್ಮರಿಸಿದ್ದಾರೆ.

ಈ ಹಿಂದೆ ರಂಜಾನ್ ಬಂದ್ರೆ ನಾವು ಅವರ ಮನೆಗೆ ಹೋಗಿ ಬಿರಿಯಾನಿ ತಿಂದು ಬರ್ತಿದ್ವಿ, ಕ್ರಿಸ್ಮಸ್‌ಗೆ ಹೋಗಿ ಕೇಕ್ ತಿನ್ನುತ್ತಿದ್ವಿ. ಯುಗಾದಿ ಬಂದಾಗ ಅವರು ನಮ್ಮ ಮನೆಗೆ ಬಂದು ಹೋಳಿಗೆ ಊಟ ಮಾಡ್ತಿದ್ದರು. ಆದ್ರೆ ಈಗ ಎಲ್ಲ ಹಬ್ಬಗಳನ್ನು ಪೊಲೀಸ್ ಬಂದೋಬಸ್ತ್‌ನಲ್ಲಿ ಆಚರಣೆ ಮಾಡಬೇಕಿದೆ. 144 ಸೆಕ್ಷನ್ ವಿಧಿಸಿ ಹಬ್ಬ ಆಚರಣೆ ಮಾಡಬೇಕಾದಂತಹ ಪರಿಸ್ಥಿತಿ ಬಂದಿದೆ. ಇದು ಯಾರಿಂದ ಮತ್ತು ಯಾಕೆ ಆಗಿದೆ ಅನ್ನೋದನ್ನ ಯೋಚಿಸಬೇಕು ಎಂದು ಸಲಹೆ ನೀಡಿದ್ದಾರೆ.

ಕಳೆದ 10 ವರ್ಷಗಳಲ್ಲಿ ಪರಿಸ್ಥಿತಿ ಬದಲಾಗಿದೆ. ಹಬ್ಬಗಳನ್ನು ಪೊಲೀಸ್ ಬಂದೋಬಸ್ತ್‌ನಲ್ಲಿ ಆಚರಿಸಬೇಕಿದೆ. ಯಾರೋ ನಾಲ್ಕು ಜನ ಬಂದು ನಮ್ಮ ಧರ್ಮ ಶ್ರೇಷ್ಠ ಅಂತ ಹೇಳುವುದರಿಂದ ಪೊಲೀಸರು ಎಲ್ಲದಕ್ಕೂ ಭದ್ರತೆ ನೀಡಬೇಕಿದೆ. ಇದು ದುರ್ದೈವದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago