Featured

ಕಳೆದ 8 ವರ್ಷಗಳಲ್ಲಿ 98 ಲಕ್ಷ ಕೋಟಿ ಸಾಲ ಮಾಡಿದ್ದೇ ಮೋದಿಯವರ ಸಾಧನೆ : ದಿನೇಶ್ ಗುಂಡುರಾವ್ – Vishwanews24

ಮೋದಿ ಆಡಳಿತದಲ್ಲಿ ಭಾರತ ಸಾಲದಲ್ಲಿ ವಿಶ್ವಗುರು ಆಗಿದೆ ..

ಬೆಂಗಳೂರು: ಮೋದಿ ಆಡಳಿತದಲ್ಲಿ ಭಾರತ ಸಾಲದಲ್ಲಿ ವಿಶ್ವಗುರು ಆಗಿದೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡುರಾವ್ ಲೇವಡಿ ಮಾಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿದ ಅವರು ” ಕಳೆದ 8 ವರ್ಷಗಳಲ್ಲಿ 98 ಲಕ್ಷ ಕೋಟಿ ಸಾಲ ಮಾಡಿದ್ದೇ ಮೋದಿಯವರ ಸಾಧನೆ. ಯುಪಿಎ ಆಡಳಿತದ ಅಂತ್ಯಕ್ಕೆ ಭಾರತದ ಸಾಲ 63,583 ಕೋಟಿ ಇತ್ತು.ಆದರೆ ಮೋದಿಯವರು ಕೇವಲ‌ 8 ವರ್ಷದಲ್ಲಿ ಸಾಲದ ಪ್ರಮಾಣ 1.40 ಲಕ್ಷ ಕೋಟಿಗೆ ಏರಿಸಿದ್ದಾರೆ.ಈ ಸಾಲ ಮಾಡಿರುವುದು ಯಾರ ಉದ್ಧಾರಕ್ಕೆ ಎಂದು ಪ್ರಶ್ನಿಸಿದ್ದಾರೆ.

ಸಾಲ‌‌ ಮಾಡಿ ತುಪ್ಪ ತಿನ್ನುವಂತೆ ಮೋದಿ ಆಡಳಿತದಲ್ಲಿ ಗೊತ್ತು ಗುರಿಯಿಲ್ಲದೆ ಸಾಲ ಮಾಡಲಾಗಿದೆ.ಈ ಸಾಲದಲ್ಲಿ ತುಪ್ಪ ತಿನ್ನುತ್ತಿರುವವರು ಯಾರು ಎಂಬುದೇ ಯಕ್ಷ ಪ್ರಶ್ನೆಯಾಗಿದೆ. ಜಿಡಿಪಿ ಕುಸಿದಿದೆ.ಅಭಿವೃದ್ಧಿ ಶೂನ್ಯವಾಗಿದೆ.ಹಾಗಾದರೆ ಆ ಸಾಲ ಎಲ್ಲಿಗೆ ಖರ್ಚಾಗುತ್ತಿದೆ. ಪಿಎಂಕೇರ್ಸ್ ನಂತೆ ಯಾವುದಾದರೂ ಉಂಡೆನಾಮದ ಸ್ಕೀಮ್‌ಗೆ ಹಣ ಬಳಕೆಯಾಗುತ್ತಿದೆಯೆ ಎಂದು ಪ್ರಶ್ನಿಸಿದ್ದಾರೆ.

ಮನ್‌ಮೋಹನ್ ಸಿಂಗ್ ಸರ್ಕಾರವಿದ್ದಾಗ ಜನರಿಗೆ ಗ್ಯಾಸ್ ಸಬ್ಸಿಡಿ, ರಸಗೊಬ್ಬರ ಸಬ್ಸಿಡಿ, ತೈಲಗಳ ಮೇಲೆ ಅತಿಕಡಿಮೆ ತೆರಿಗೆ ಹಾಗೂ ಅಬಕಾರಿ ಸುಂಕ ವಿಧಿಸಲಾಗುತಿತ್ತು.ಅಷ್ಟಾದರೂ ದೇಶದ ಸಾಲ 76 ಲಕ್ಷ ಕೋಟಿ ದಾಟಿರಲಿಲ್ಲ.ಈ ಸರ್ಕಾರದಲ್ಲಿ ಬಹುತೇಕ ಸಬ್ಸಿಡಿಗಳು ರದ್ದಾಗಿವೆ. ತೈಲಗಳ ಮೇಲೆ ವಿಪರೀತ ಎನ್ನುವಷ್ಟು ತೆರಿಗೆ ವಿಧಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಮೋದಿಯವರು ಕಾಂಗ್ರೆಸ್ ಮಾಡಿದ ಸಾಲ ತೀರಿಸುತ್ತಿದ್ದಾರೆ ಎಂದು ಬಿಜೆಪಿ ಭಕ್ತರು, ಸೋಶಿಯಲ್ ಮೀಡಿಯಾಗಳಲ್ಲಿ ಸುಳ್ಳು ಹರಡುತ್ತಿದ್ದಾರೆ. ವಾಸ್ತವವಾಗಿ 2014 ರವರೆಗೆ ಇದ್ದ ದೇಶದ ಒಟ್ಟು ಸಾಲದ ಮೊತ್ತವೇ 76 ಲಕ್ಷ ಕೋಟಿ.‌ಆದರೆ ಮೋದಿ 8 ವರ್ಷದಲ್ಲಿ 98 ಲಕ್ಷ ಕೋಟಿ ಹೆಚ್ಚವರಿ ಸಾಲ ಮಾಡಿದ್ದಾರೆ.ಹೀಗಿರುವಾಗ ಮೋದಿ ಯಾರ ಸಾಲ ತೀರಿಸುತ್ತಿದ್ದಾರೆ?

ಮೋದಿ ಆಡಳಿತದಲ್ಲಿ ಆರ್ಥಿಕ ಶಿಸ್ತು ಹಳ್ಳ ಹಿಡಿದಿದೆ ಎಂಬುದಕ್ಕೆ ಈ ಸರ್ಕಾರ ಮಾಡಿರುವ ಸಾಲದ ಪ್ರಮಾಣವೇ ಸಾಕ್ಷಿ. ಮೋದಿಯವರು‌ ಮಾಡಿರುವ ಸಾಲದ ಎಫೆಕ್ಟ್ ಹೇಗಿದೆಯೆಂದರೆ, ಅಸಲು ಹೋಗಲಿ, ಬಡ್ಡಿ ಕಟ್ಟಲು ಸಾಧ್ಯವಿಲ್ಲದಷ್ಟು ವಿಪರೀತವಾಗಿದೆ. ಇದು ದೇಶ ದಿವಾಳಿಯಾಗುತ್ತಿರುವ ಪ್ರಾಥಮಿಕ ಲಕ್ಷಣ. ಇನ್ನಾದರೂ ಬಿಜೆಪಿ ಭಕ್ತರು ಮೋದಿ ಭ್ರಮೆಯಿಂದ ಹೊರಬರಲಿ ಎಂದು ಹೇಳಿದ್ದಾರೆ

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago