Featured

ಕಳ್ಳತನ ಮಾಡಲು ಮೇಕಪ್‌ನನ್ನೇ ಅಸ್ತ್ರವಾಗಿ ಬಳಸುತ್ತಿದ್ದ ದಂಪತಿ : ಶೋಕಿ ಜೀವನಕ್ಕೆ ಕಳ್ಳತನದ ಹಣ – vishwanews24

ಕಳ್ಳತನ ಮಾಡಲು ಮೇಕಪ್‌ನನ್ನೇ ಅಸ್ತ್ರವಾಗಿ ಬಳಸುತ್ತಿದ್ದ ದಂಪತಿ : ಶೋಕಿ ಜೀವನಕ್ಕೆ ಕಳ್ಳತನದ ಹಣ

ಸೌಂದರ್ಯವೇ ಈಕೆಗೆ ಕಳ್ಳತನದ ಅಸ್ತ್ರ ; ಮೇಕಪ್‌ಗೆ ತಿಂಗಳಿಗೆ 5 ಲಕ್ಷ ರೂ. ಖರ್ಚು

ಬೆಂಗಳೂರು : ಮೇಕಪ್ ಎಂದರೆ ಕೇವಲ ಸೌಂದರ್ಯ ಹೆಚ್ಚಿಸುವ ಸಾಧನ ಮಾತ್ರವಲ್ಲ, ಆತ್ಮವಿಶ್ವಾಸಕ್ಕೂ ಕಾರಣ ಎನ್ನಲಾಗುತ್ತದೆ. ಆದರೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿರುವ ಪ್ರಕರಣವೊಂದು ಈ ಮಾತಿಗೆ ತದ್ವಿರುದ್ಧದ ಅರ್ಥ ನೀಡಿದೆ. ಜನರ ನಂಬಿಕೆ ಗೆಲ್ಲಲು ಹಾಗೂ ಯಾರಿಗೂ ಅನುಮಾನ ಬಾರದಂತೆ ಕಳ್ಳತನ ಮಾಡಲು ಮೇಕಪ್‌ನನ್ನೇ ಅಸ್ತ್ರವಾಗಿ ಬಳಸುತ್ತಿದ್ದ ದಂಪತಿಯನ್ನು ಕೆಆರ್ ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಗಾಯತ್ರಿ ಮತ್ತು ಶ್ರೀಕಾಂತ್ ಎಂದು ಗುರುತಿಸಲಾಗಿದ್ದು, ಇವರಿಂದ ಸುಮಾರು 60 ಲಕ್ಷ ರೂ. ಮೌಲ್ಯದ 398 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಜಾತ್ರೆ–ದೇಗುಲಗಳೇ ಟಾರ್ಗೆಟ್ : ಆರೋಪಿತ ಗಾಯತ್ರಿ ತನ್ನ ಪತಿಯೊಂದಿಗೆ ರಾಜ್ಯದ ವಿವಿಧ ಜಾತ್ರೆಗಳು, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ದೇವಸ್ಥಾನಗಳಿಗೆ ತೆರಳಿ, ಅಲ್ಲಿ ಭಕ್ತರ ಮಧ್ಯೆ ಬೆರೆತು ಕೈಚಳಕ ತೋರಿಸುತ್ತಿದ್ದಳು. ವಿಶೇಷವಾಗಿ ಮಹಿಳೆಯರ ಬಳಿ ಸುಳಿದಾಡಿ, ಅವರಿಗೆ ತಿಳಿಯದಂತೆ ಮೈಮೇಲಿದ್ದ ಚಿನ್ನಾಭರಣವನ್ನು ಕದಿಯುವುದರಲ್ಲಿ ಆಕೆ ನಿಪುಣಳಾಗಿದ್ದಳು ಎನ್ನಲಾಗಿದೆ.

ತಿಂಗಳಿಗೆ 5 ಲಕ್ಷ ರೂ. ಮೇಕಪ್‌ಗೆ ಖರ್ಚು! : ಪೊಲೀಸರ ತನಿಖೆಯಲ್ಲಿ ಹೊರಬಂದ ಅಚ್ಚರಿಯ ಸಂಗತಿ ಎಂದರೆ, ಗಾಯತ್ರಿ ತನ್ನ ಮೇಕಪ್ ಮತ್ತು ಲುಕ್‌ಗಾಗಿ ತಿಂಗಳಿಗೆ ಸುಮಾರು 5 ಲಕ್ಷ ರೂ. ಖರ್ಚು ಮಾಡುತ್ತಿದ್ದಳು. ದುಬಾರಿ ಬ್ಯೂಟಿ ಪಾರ್ಲರ್‌ಗಳಲ್ಲಿ ಒಂದೇ ಬಾರಿ 25 ರಿಂದ 30 ಸಾವಿರ ರೂ.ವರೆಗೆ ಹಣ ಪಾವತಿಸಿರುವ ದಾಖಲೆಗಳು ಪತ್ತೆಯಾಗಿವೆ. ಆರೋಪಿತೆಯ ಮೊಬೈಲ್‌ನಲ್ಲಿರುವ ಹಣಕಾಸು ವ್ಯವಹಾರಗಳನ್ನು ನೋಡಿ ಪೊಲೀಸರೇ ಶಾಕ್ ಆಗಿದ್ದಾರೆ.

ಶೋಕಿ ಜೀವನಕ್ಕೆ ಕಳ್ಳತನದ ಹಣ : ಕದ್ದ ಚಿನ್ನಾಭರಣವನ್ನು ಮಾರಾಟ ಮಾಡಿ, ಅದರಿಂದ ಬೇರೆ ಆಭರಣಗಳನ್ನು ಖರೀದಿ ಮಾಡಿ ಬ್ಯಾಂಕ್‌ನಲ್ಲಿ ಇಡುವುದು ಅಥವಾ ಮರುಮಾರಾಟ ಮಾಡುವುದೇ ಇವರ ರೂಢಿ. ಈ ಹಣದಿಂದ ಐಫೋನ್, ಬ್ರಾಂಡೆಡ್ ಬಟ್ಟೆಗಳು, ಮಾಲ್‌ಗಳಲ್ಲಿ ಶಾಪಿಂಗ್ ಮಾಡಿ ದಂಪತಿ ಐಶಾರಾಮಿ ಜೀವನ ನಡೆಸುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ವಿಚಾರಣೆ ವೇಳೆ ಗಾಯತ್ರಿ ನೀಡಿದ ಹೇಳಿಕೆ ಇನ್ನಷ್ಟು ಶಾಕಿಂಗ್ ಆಗಿದೆ. “ಅಂದವಾಗಿ ಮೇಕಪ್ ಮಾಡಿಕೊಂಡು, ದುಬಾರಿ ಸೀರೆ ಉಟ್ಟು ದೇವಸ್ಥಾನ ಅಥವಾ ಜಾತ್ರೆಗೆ ಹೋದರೆ ಯಾರೂ ಅನುಮಾನ ಪಡುವುದಿಲ್ಲ. ಅದಕ್ಕಾಗಿಯೇ ಮೇಕಪ್ ಇಲ್ಲದೆ ಮನೆ ಹೊರಗೆ ಬರುತ್ತಿರಲಿಲ್ಲ” ಎಂದು ಆಕೆ ಪೊಲೀಸರಿಗೆ ಹೇಳಿದ್ದಾಳೆ. ಪ್ರಸ್ತುತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

 

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

4 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

5 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

5 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

8 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

8 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

9 hours ago