Featured

ಕಳ್ಳತನ ಮಾಡಲು ಮೇಕಪ್‌ನನ್ನೇ ಅಸ್ತ್ರವಾಗಿ ಬಳಸುತ್ತಿದ್ದ ದಂಪತಿ : ಶೋಕಿ ಜೀವನಕ್ಕೆ ಕಳ್ಳತನದ ಹಣ – vishwanews24

ಕಳ್ಳತನ ಮಾಡಲು ಮೇಕಪ್‌ನನ್ನೇ ಅಸ್ತ್ರವಾಗಿ ಬಳಸುತ್ತಿದ್ದ ದಂಪತಿ : ಶೋಕಿ ಜೀವನಕ್ಕೆ ಕಳ್ಳತನದ ಹಣ

ಸೌಂದರ್ಯವೇ ಈಕೆಗೆ ಕಳ್ಳತನದ ಅಸ್ತ್ರ ; ಮೇಕಪ್‌ಗೆ ತಿಂಗಳಿಗೆ 5 ಲಕ್ಷ ರೂ. ಖರ್ಚು

ಬೆಂಗಳೂರು : ಮೇಕಪ್ ಎಂದರೆ ಕೇವಲ ಸೌಂದರ್ಯ ಹೆಚ್ಚಿಸುವ ಸಾಧನ ಮಾತ್ರವಲ್ಲ, ಆತ್ಮವಿಶ್ವಾಸಕ್ಕೂ ಕಾರಣ ಎನ್ನಲಾಗುತ್ತದೆ. ಆದರೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿರುವ ಪ್ರಕರಣವೊಂದು ಈ ಮಾತಿಗೆ ತದ್ವಿರುದ್ಧದ ಅರ್ಥ ನೀಡಿದೆ. ಜನರ ನಂಬಿಕೆ ಗೆಲ್ಲಲು ಹಾಗೂ ಯಾರಿಗೂ ಅನುಮಾನ ಬಾರದಂತೆ ಕಳ್ಳತನ ಮಾಡಲು ಮೇಕಪ್‌ನನ್ನೇ ಅಸ್ತ್ರವಾಗಿ ಬಳಸುತ್ತಿದ್ದ ದಂಪತಿಯನ್ನು ಕೆಆರ್ ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಗಾಯತ್ರಿ ಮತ್ತು ಶ್ರೀಕಾಂತ್ ಎಂದು ಗುರುತಿಸಲಾಗಿದ್ದು, ಇವರಿಂದ ಸುಮಾರು 60 ಲಕ್ಷ ರೂ. ಮೌಲ್ಯದ 398 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಜಾತ್ರೆ–ದೇಗುಲಗಳೇ ಟಾರ್ಗೆಟ್ : ಆರೋಪಿತ ಗಾಯತ್ರಿ ತನ್ನ ಪತಿಯೊಂದಿಗೆ ರಾಜ್ಯದ ವಿವಿಧ ಜಾತ್ರೆಗಳು, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ದೇವಸ್ಥಾನಗಳಿಗೆ ತೆರಳಿ, ಅಲ್ಲಿ ಭಕ್ತರ ಮಧ್ಯೆ ಬೆರೆತು ಕೈಚಳಕ ತೋರಿಸುತ್ತಿದ್ದಳು. ವಿಶೇಷವಾಗಿ ಮಹಿಳೆಯರ ಬಳಿ ಸುಳಿದಾಡಿ, ಅವರಿಗೆ ತಿಳಿಯದಂತೆ ಮೈಮೇಲಿದ್ದ ಚಿನ್ನಾಭರಣವನ್ನು ಕದಿಯುವುದರಲ್ಲಿ ಆಕೆ ನಿಪುಣಳಾಗಿದ್ದಳು ಎನ್ನಲಾಗಿದೆ.

ತಿಂಗಳಿಗೆ 5 ಲಕ್ಷ ರೂ. ಮೇಕಪ್‌ಗೆ ಖರ್ಚು! : ಪೊಲೀಸರ ತನಿಖೆಯಲ್ಲಿ ಹೊರಬಂದ ಅಚ್ಚರಿಯ ಸಂಗತಿ ಎಂದರೆ, ಗಾಯತ್ರಿ ತನ್ನ ಮೇಕಪ್ ಮತ್ತು ಲುಕ್‌ಗಾಗಿ ತಿಂಗಳಿಗೆ ಸುಮಾರು 5 ಲಕ್ಷ ರೂ. ಖರ್ಚು ಮಾಡುತ್ತಿದ್ದಳು. ದುಬಾರಿ ಬ್ಯೂಟಿ ಪಾರ್ಲರ್‌ಗಳಲ್ಲಿ ಒಂದೇ ಬಾರಿ 25 ರಿಂದ 30 ಸಾವಿರ ರೂ.ವರೆಗೆ ಹಣ ಪಾವತಿಸಿರುವ ದಾಖಲೆಗಳು ಪತ್ತೆಯಾಗಿವೆ. ಆರೋಪಿತೆಯ ಮೊಬೈಲ್‌ನಲ್ಲಿರುವ ಹಣಕಾಸು ವ್ಯವಹಾರಗಳನ್ನು ನೋಡಿ ಪೊಲೀಸರೇ ಶಾಕ್ ಆಗಿದ್ದಾರೆ.

ಶೋಕಿ ಜೀವನಕ್ಕೆ ಕಳ್ಳತನದ ಹಣ : ಕದ್ದ ಚಿನ್ನಾಭರಣವನ್ನು ಮಾರಾಟ ಮಾಡಿ, ಅದರಿಂದ ಬೇರೆ ಆಭರಣಗಳನ್ನು ಖರೀದಿ ಮಾಡಿ ಬ್ಯಾಂಕ್‌ನಲ್ಲಿ ಇಡುವುದು ಅಥವಾ ಮರುಮಾರಾಟ ಮಾಡುವುದೇ ಇವರ ರೂಢಿ. ಈ ಹಣದಿಂದ ಐಫೋನ್, ಬ್ರಾಂಡೆಡ್ ಬಟ್ಟೆಗಳು, ಮಾಲ್‌ಗಳಲ್ಲಿ ಶಾಪಿಂಗ್ ಮಾಡಿ ದಂಪತಿ ಐಶಾರಾಮಿ ಜೀವನ ನಡೆಸುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ವಿಚಾರಣೆ ವೇಳೆ ಗಾಯತ್ರಿ ನೀಡಿದ ಹೇಳಿಕೆ ಇನ್ನಷ್ಟು ಶಾಕಿಂಗ್ ಆಗಿದೆ. “ಅಂದವಾಗಿ ಮೇಕಪ್ ಮಾಡಿಕೊಂಡು, ದುಬಾರಿ ಸೀರೆ ಉಟ್ಟು ದೇವಸ್ಥಾನ ಅಥವಾ ಜಾತ್ರೆಗೆ ಹೋದರೆ ಯಾರೂ ಅನುಮಾನ ಪಡುವುದಿಲ್ಲ. ಅದಕ್ಕಾಗಿಯೇ ಮೇಕಪ್ ಇಲ್ಲದೆ ಮನೆ ಹೊರಗೆ ಬರುತ್ತಿರಲಿಲ್ಲ” ಎಂದು ಆಕೆ ಪೊಲೀಸರಿಗೆ ಹೇಳಿದ್ದಾಳೆ. ಪ್ರಸ್ತುತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago