Featured

ಕಳ್ಳತನ ಮಾಡಲು ವಿಮಾನದಲ್ಲಿ ಬರುವ ಐಷಾರಾಮಿ ಕಳ್ಳರೀಗ ಪೋಲಿಸರ ಕೈಗೆ…!

ಬೆಂಗಳೂರು: ದೆಹಲಿಯಿಂದ ವಿಮಾನದಲ್ಲಿ ಬಂದು ನಗರದ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಐಷಾರಾಮಿ ಚೋರರಿಬ್ಬರು ಜೀವನ್‌ಬಿಮಾ ನಗರ ಪೊಲೀಸರ ಅತಿಥಿಗಳಾಗಿದ್ದಾರೆ.

ಅರ್ಮಾನ್ ಖಾನ್ (27) ಅಲಿಯಾಸ್ ಸೋನು ಹಾಗೂ ಆಶೀಷ್ (28) ಬಂಧಿತರು. ಕದ್ದ ಮಾಲು ಖರೀದಿಸಿದ ತಪ್ಪಿಗೆ ದೆಹಲಿ ಚೋರ್‌ ಬಜಾರ್‌ನ ಐವರು ಆಭರಣ ವ್ಯಾಪಾರಿಗಳು ಸಹ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಬಂಧಿತರಿಂದ 1.5 ಕೆ.ಜಿ ಚಿನ್ನ ಹಾಗೂ 2 ಕೆ.ಜಿ ಬೆಳ್ಳಿ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

2014ರಿಂದಲೂ ನಗರದಲ್ಲಿ ಕಳ್ಳತನ ಮಾಡುತ್ತಿರುವ ಅರ್ಮಾನ್ ವಿರುದ್ಧ ಅಶೋಕನಗರ, ರಾಮಮೂರ್ತಿನಗರ, ಬೈಯಪ್ಪನಹಳ್ಳಿ, ಬಾಣಸವಾಡಿ, ರಾಜಾಜಿನಗರ, ಜೀವನ್‌ಬಿಮಾನಗರ ಹಾಗೂ ಮೈಕೊಲೇಔಟ್‌ ಠಾಣೆಗಳಲ್ಲಿ 40ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ವಿದ್ಯಾರ್ಥಿ ಸೋಗು: ದೆಹಲಿಯಿಂದ ವಿಮಾನದಲ್ಲಿ ಚೆನ್ನೈಗೆ ಬರುತ್ತಿದ್ದ ಅರ್ಮಾನ್, ಅಲ್ಲಿಂದ ಕ್ಯಾಬ್‌ನಲ್ಲಿ ಮಧ್ಯಾಹ್ನದ ವೇಳೆಗೆ ನಗರ ಪ್ರವೇಶಿಸುತ್ತಿದ್ದ. ವಿದ್ಯಾರ್ಥಿಯ ಸೋಗಿನಲ್ಲಿ ಹೆಗಲಿಗೆ ಬ್ಯಾಗ್ ಹಾಕಿಕೊಂಡು ಪ್ರತಿಷ್ಠಿತ ರಸ್ತೆಗಳಲ್ಲಿ ಓಡಾಡುತ್ತಿದ್ದ ಆತ, ಬಾಗಿಲು ಹಾಕಿರುವ ಮನೆಗಳ ಹತ್ತಿರ ಹೋಗಿ ಏಳೆಂಟು ಬಾರಿ ಕಾಲಿಂಗ್ ಬೆಲ್ ಒತ್ತುತ್ತಿದ್ದ. ಮನೆ ಮಾಲೀಕರು ಬಾಗಿಲು ತೆಗೆದರೆ, ಯಾವುದೋ ವಿಳಾಸ ಕೇಳುವವನಂತೆ ನಾಟಕವಾಡಿ ಹೊರಟು ಹೋಗುತ್ತಿದ್ದ. ಬಾಗಿಲು ತೆಗೆಯದಿದ್ದರೆ, ಬೀಗ ಮುರಿದು ನಗ-ನಾಣ್ಯ ದೋಚುತ್ತಿದ್ದ.

‘ವರ್ಷದ ಹಿಂದೆ ಆಶೀಷ್ ಸಹ ಅರ್ಮಾನ್‌ನ ಜತೆ ಸೇರಿದ್ದ. ಇತ್ತೀಚೆಗೆ ಇವರಿಬ್ಬರೂ ಜೀವನ್‌ಬಿಮಾ ನಗರ ವ್ಯಾಪ್ತಿಯ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದರು. ಸಿ.ಸಿ ಟಿ.ವಿ ಕ್ಯಾಮೆರಾದಲ್ಲಿ ಅವರ ಚಲನವಲನಗಳು ಸೆರೆಯಾಗಿದ್ದವು. ಅವರ ಚಹರೆಗಳನ್ನು ಎಲ್ಲ ಠಾಣೆಗಳಿಗೂ ರವಾನಿಸಿದಾಗ, 2014ರಲ್ಲಿ ಅಶೋಕನಗರ ಪೊಲೀಸರು ಅರ್ಮಾನ್‌ನನ್ನು ಬಂಧಿಸಿದ್ದ ಸಂಗತಿ ಗೊತ್ತಾಯಿತು. ಆ ಪ್ರಕರಣದ ತನಿಖಾಧಿಕಾರಿಯಿಂದ ಆರೋಪಿಯ ಪೂರ್ವಾಪರ ಪಡೆದು ಶೋಧ ಪ್ರಾರಂಭಿಸಿದೆವು’ ಎಂದು ಪೊಲೀಸರು ಕಾರ್ಯಾಚರಣೆಯನ್ನು ವಿವರಿಸಿದರು.

‘ಅರ್ಮಾನ್ ಪ್ರತಿ ಬಾರಿ ಕೃತ್ಯ ಎಸಗಿದಾಗಲೂ ಸಿಮ್ ಬದಲಿಸುತ್ತಿದ್ದ. ಹೀಗಾಗಿ, ಆತನ ಪತ್ತೆ ಕಷ್ಟವಾಗಿತ್ತು. ರಾತ್ರಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದನೆಂದು ಗಸ್ತು ಸಿಬ್ಬಂದಿ ಇತ್ತೀಚೆಗೆ ಯುವಕನೊಬ್ಬನನ್ನು ಠಾಣೆಗೆ ಕರೆತಂದರು. ಚಹರೆ ಪರಿಶೀಲಿಸಿದಾಗ ಆತ ಆಶೀಷ್ ಆಗಿದ್ದ. ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ, ಆತ ಅರ್ಮಾನ್‌ನ ಹೊಸ ಮೊಬೈಲ್ ಸಂಖ್ಯೆಯನ್ನು ಕೊಟ್ಟ. ಆ ಸಂಖ್ಯೆಯ ಜಾಡು ಹಿಡಿದು ದೆಹಲಿಗೆ ತೆರಳಿದ ಸಿಬ್ಬಂದಿ, ಅರ್ಮಾನ್‌ನನ್ನು ಹಾಗೂ ಆಭರಣ ವ್ಯಾಪಾರಿಗಳನ್ನು ವಶಕ್ಕೆ ಪಡೆದು ನಗರಕ್ಕೆ ಕರೆತಂದಿತು’ ಎಂದು ಮಾಹಿತಿ ನೀಡಿದರು.

Vishwa News 24

Recent Posts

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ – vishwanews24

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…

1 hour ago

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ – vishwanews24

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…

1 hour ago

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

3 hours ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

4 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

5 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

5 hours ago