ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕಾಗಿರುವ ಸರ್ಕಾರ‌ ಸಂಪೂರ್ಣ ಸ್ಥಗಿತಗೊಂಡಿದೆ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆಯೇ? : ಸಿದ್ದರಾಮಯ್ಯ -Vishwanews24

ಬೆಂಗಳೂರು: ರಾಜ್ಯಾದ್ಯಂತ ಕಳೆದ ಎರಡು ಮೂರು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು ಅನೇಕ ಕಡೆ ಪ್ರವಾಹದ ಭೀತಿ ಉಂಟಾಗಿದೆ. ಕೊಡಗು ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಭೂಕುಸಿತದ ಭೀತಿ ಉಂಟಾಗಿದ್ದು ಈಗಾಗಲೇ ಹಲವೆಡೆ ಮನೆಗು ಉರುಳಿ ಜನರು ಅತಂತ್ರಗೊಂಡಿದ್ದಾರೆ.

ಈ ಮಧ್ಯೆ ಸರ್ಕಾರಕ್ಕೆ ಎಚ್ಚರಿಕೆ ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೂಡಲೇ ಎಚ್ಚೆತ್ತು ಜನರ ರಕ್ಷಣೆಯಲ್ಲಿ ತೊಡಗುವಂತೆ ಸಲಹೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕಳೆದರಡು ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆ, ಏರುತ್ತಿರುವ ನೆರೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕಾಗಿರುವ ಸರ್ಕಾರ‌ ಸಂಪೂರ್ಣ ಸ್ಥಗಿತಗೊಂಡಿದೆ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆಯೇ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಇನ್ನೊಂದು ಟ್ವೀಟ್‌ನಲ್ಲಿ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದಿರುವ ಅವರು, ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಮಾತ್ರವಲ್ಲ ಉತ್ತರ ಕರ್ನಾಟಕದಲ್ಲಿಯೂ ಮಳೆಯಿಂದಾಗಿ ಜನ ಪ್ರವಾಹದ ಭೀತಿಯಲ್ಲಿದ್ದಾರೆ. ರಾಜ್ಯ ಸರ್ಕಾರ ತಕ್ಷಣ ಕಾರ್ಯಪ್ರವೃತ್ತವಾಗಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಅವರಿಗೆ ಊಟ-ವಸತಿ ವ್ಯವಸ್ಥೆ ಕಲ್ಪಿಸಿ ಅವರಲ್ಲಿ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದಾರೆ..

 

 

Vishwa News 24

Recent Posts

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

7 minutes ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

15 minutes ago

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

49 minutes ago

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ – vishwanews24

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…

1 hour ago

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ – vishwanews24

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…

2 hours ago

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ – vishwanews24

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…

2 hours ago