Featured

ಕಸಾಯಿಖಾನೆಗೆ ಸಾಗಿಸುತ್ತಿದ್ದ 44 ಎಳೆಯ ಹಸುವಿನ ಕರುಗಳ ರಕ್ಷಣೆ..

ಚನ್ನರಾಯಪಟ್ಟಣ: ಕಸಾಯಿಖಾನೆಗೆ ಸಾಗಿಸುತ್ತಿದ್ದ 44 ಎಳೆಯ ಕರುಗಳನ್ನು ಪ್ರಾಣಿ ದಯಾ ಸಂಘದ ಸದಸ್ಯರು ರಕ್ಷಿಸಿದ್ದಾರೆ. ಚನ್ನರಾಯಪಟ್ಟಣದ ಕಡೆಯಿಂದ ಪಟ್ಟಣದ ಮಾರ್ಗವಾಗಿ ಮೈಸೂರಿಗೆ ತೆರಳುತ್ತಿದ್ದ ಲಾರಿಯನ್ನು ಸಂಘದ ಸದಸ್ಯರು ತಪಾಸಣೆ ಮಾಡಿದಾಗ 44 ಹಸುವಿನ ಕರುಗಳು ಪತ್ತೆಯಾಗಿದ್ದು, ಇವುಗಳನ್ನು ಕಸಾಯಿಖಾನೆಗೆ ಕೊಂಡೊಯ್ಯುತ್ತಿರುವುದಾಗಿ ತಿಳಿದು ಬಂದಿದೆ.

ತಾಲೂಕಿನಲ್ಲಿ ಹೈನುಗಾರಿಕೆ ಮಾಡುತ್ತಿರುವವರು ತಮ್ಮ ಸೀಮೆಹಸುಗಳಿಗೆ ಗಂಡು ಕರುಗಳು ಜನಿಸಿದರೆ ತಕ್ಷಣ ಕಡಿಮೆ ಹಣಕ್ಕೆ ಕಸಾಯಿಖಾನೆಯವರಿಗೆ ಮಾರಾಟ ಮಾಡಿ ಬಿಡುತ್ತಾರೆ. ಕರುಗಳು ಹುಟ್ಟಿದ ಒಂದು ದಿನಗಳಿಂದ ಐದು ದಿನಗಳ ಕರುಗಳನ್ನು ತುಂಬಿಕೊಂಡ ಸಾಗಾಣಿಕೆ ಮಾಡುತ್ತಿರುವ ಬಗ್ಗೆ ಮಾಹಿತಿ ಸಂಗ್ರಹ ಮಾಡಿದ್ದ ಪ್ರಾಣಿ ದಯಾ ಸಂಘದ ಗೌತಮ್ ಎಂಬುವವರು ಪಟ್ಟಣದ ಅಂಚೆ ಕಚೇರಿ ಮುಂಭಾಗದಲ್ಲಿ ವಾಹನವನ್ನು ತಡೆದು ತಕ್ಷಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ಕರುಗಳನ್ನು ತುಂಬಿದ್ದ ವಾಹನ ಮತ್ತು ಚಾಲಕ ವಿಶ್ವ ಮತ್ತು ಸಹಾಯಕ ಯೋಗೇಶ್ ಎಂಬುವವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಪುಟ್ಟ ಕರುಗಳು ನಿತ್ರಾಣಗೊಂಡು ಕುಸಿದು ಬಿದ್ದು ನರಳುವುದನ್ನು ಕಂಡು ಮರುಗಿದ ಪಟ್ಟಣ ಪೊಲೀಸ್ ಠಾಣೆ ಉಪ ನಿರೀಕ್ಷಕ ಎಚ್.ಎಸ್.ವೆಂಕಟೇಶ್ ಡೈರಿಯಿಂದ ಹಾಲನ್ನು ತಂದು ಬಾಟಲ್‍ನಿಂದ ಮಕ್ಕಳಿಗೆ ಹಾಲು ಕುಡಿಸುವ ರೀತಿ ಸಂತೈಸಿದರು. ಜೊತೆಗೆ ಸಣ್ಣಪುಟ್ಟ ಗಾಯಗೊಂಡಿದ್ದ ಕರುಗಳಿಗೆ ಔಷಧಿ ನೀಡಿ ಉಪಚಾರ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

12 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

12 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

12 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

13 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

13 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

13 hours ago