ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರನ್ನು ಬಂಧಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರವೀಣ್ ಸೂದ್ ಅವರು ಆಡಳಿತಾರೂಢ ಬಿಜೆಪಿ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದ್ದು, ಅವರನ್ನು ರಕ್ಷಣೆ ಮಾಡುತ್ತಿದ್ದಾರೆ. ಆದರೆ, ನಮ್ಮ ಪಕ್ಷದ ನಾಯಕರ ವಿರುದ್ಧ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ’ ಎಂದು ಡಿಕೆಶಿ ದೂರಿದ್ದಾರೆ.
‘ಡಿಜಿಪಿ ನಾಲಾಯಕ್ (ನಿಷ್ಪ್ರಯೋಜಕ). ಕೂಡಲೇ ಅವರ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಬೇಕು’ ಎಂದು ಶಿವಕುಮಾರ್ ಆಗ್ರಹಿಸಿದ್ದಾರೆ.
‘ಪ್ರವೀಣ್ ಸೂದ್ ಡಿಜಿಪಿಯಾಗಿ ಮೂರು ವರ್ಷ ಸೇವೆ ಸಲ್ಲಿಸಿದ್ದಾರೆ. ಎಷ್ಟು ದಿನ ಅವರನ್ನೇ ಡಿಜಿಪಿ ಹುದ್ದೆಯಲ್ಲಿ ಇಟ್ಟುಕೊಂಡು ಪೂಜೆ ಮಾಡುತ್ತೀರಿ? ಕಾಂಗ್ರೆಸ್ನವರ ಮೇಲೆ ಮಾತ್ರ ಪ್ರಕರಣ ದಾಖಲಿಸುತ್ತಿದ್ದಾರೆ. ನಮ್ಮ ಮೇಲೆ 25ಕ್ಕೂ ಹೆಚ್ಚು ಪ್ರಕರಣ ದಾಖಲಿಸಿದ್ದಾರೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಅವರ ವಿರುದ್ಧ ಕ್ರಮ ಜರುಗಿಸುವುದು ಖಚಿತ’ ಎಂದು ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕದಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲು 224 ಸದಸ್ಯ ಬಲದ ವಿಧಾನಸಭೆಯಲ್ಲಿ ಕನಿಷ್ಠ 150 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ನಾವು ಹೊಂದಿದ್ದೇವೆ ಎಂದು ಡಿಕೆಶಿ ತಿಳಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…