Featured

ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಸದಾನಂದ ಗೌಡರಿಗೆ ಅಫರ್‌ ನೀಡಿದ ಡಿಕೆಶಿ – Vishwanews24

ಉಡುಪಿ: ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಸದಾನಂದ ಗೌಡರಿಗೆ ಅಫರ್‌ ನೀಡಿದ ಡಿಕೆಶಿ

ಉಡುಪಿ: ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಸಂಸದ ಡಿಕೆ ಸದಾನಂದ ಗೌಡ ಅವರಿಗೆ ಅಚ್ಚರಿ ಎಂಬಂತೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಕಾಂಗ್ರೆಸ್ ಮುಖ್ಯಸ್ಥ ಡಿ ಕೆ ಶಿವಕುಮಾರ್ ಆಫರ್ ನೀಡಿದ್ದಾರೆ.

ಹಾಲಿ ಸಂಸದ ಡಿವಿ ಸದಾನಂದಗೌಡ ಅವರನ್ನು ಬದಿಗೊತ್ತಿ ಬೆಂಗಳೂರು ಉತ್ತರ ಬಿಜೆಪಿ ಟಿಕೆಟ್ ಶೋಭಾ ಕರಂದ್ಲಾಂಜೆ ಅವರಿಗೆ ನೀಡಿದೆ. ಶೋಭಾ ಅವರು ಬೆಂಗಳೂರಿನ ಸದಾನಂದ ಗೌಡರನ್ನು ಅವರ ನಿವಾಸಕ್ಕೆ ಭೇಟಿ ಮಾಡಿ ಬೆಂಬಲ ಕೋರಿದರು.

ಈ ಬೆಳವಣಿಗೆಯ ಬೆನ್ನಲ್ಲೇ ಇದೀಗ ಕೆಪಿಸಿಸಿ ಮುಖ್ಯಸ್ಥ ಡಿಕೆ ಶಿವಕುಮಾರ್ ಅವರು ಡಿವಿ ಸದಾನಂದಗೌಡ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಲು ಆಫರ್ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಟಿಕೆಟ್ ಹಂಚಿಕೆ ಬಳಿಕ ಸ್ವಪಕ್ಷದ ಮೇಲೆ ಲಿಂಗಾಯತ, ಕುರುಬ ಸಮುದಾಯ ಬಂಡಾಯವೆದ್ದಿದೆ. ಈಗ ಡಿವಿ ಸದಾನಂದಗೌಡರು ಕೂಡ ಬಂಡಾಯವೆದ್ದರೆ ರಾಜ್ಯದ ಪ್ರಮುಖ ಸಮುದಾಯವೊಂದರ ಬಂಡಾಯವನ್ನು ಬಿಜೆಪಿ ಎದುರಿಸಬೇಕಿದೆ. ಇದನ್ನೇ ಎನ್‌ಕ್ಯಾಚ್ ಮಾಡಿಕೊಳ್ಳಲು ಕಾಂಗ್ರೆಸ್ ಮುಂದಾಗಿದ್ದು, ಸದಾನಂದ ಗೌಡರನ್ನು ಪಕ್ಷಕ್ಕೆ ಎಳೆದು ತರುವ ಕೆಲಸ ತೆರೆಮರೆಯಲ್ಲಿ ನಡೆಯುತ್ತಿದೆ. ಡಿ.ವಿ ಸದಾನಂದ ಗೌಡ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸಿದರೆ ಒಕ್ಕಲಿಗ ಮತಗಳನ್ನು ಪಕ್ಷಕ್ಕೆ ಸೆಳೆಯಬಹುದು ಎಂಬುದು ಡಿಕೆ ಶಿವಕುಮಾರ್ ಲೆಕ್ಕಾಚಾರ. ಟಿಕೆಟ್ ಘೋಷಿಸದ ಬೆಂಗಳೂರು ಉತ್ತರ, ಮೈಸೂರು, ದಕ್ಷಿಣ ಕನ್ನಡ ಈ ಮೂರರಲ್ಲಿ ಯಾವುದಾರು ಕ್ಷೇತ್ರದಿಂದ ಡಿ.ವಿ ಸದಾನಂದ ಗೌಡ ಅವರನ್ನು ಕಣಕ್ಕಿಳಿಸುವ ಯೋಚನೆಯಲ್ಲಿದೆ ಕಾಂಗ್ರೆಸ್. ಈ ಬಗ್ಗೆ ಅವರಿಗೆ ಆಫರ್ ನೀಡಲಾಗಿದೆ. ಹೀಗಾಗಿ ಇಷ್ಟು ವರ್ಷ ಎಲ್ಲವನ್ನೂ ಕೊಟ್ಟಿರುವ ಪಕ್ಷವನ್ನು ಬಿಟ್ಟು ಡಿ.ವಿ ಸದಾನಂದ ಗೌಡ ಕೈ ಹಿಡಿತಾರಾ ಎಂಬುದನ್ನು ಕಾದುನೋಡಬೇಕಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago