Featured

ಕಾಂಗ್ರೆಸ್‌ನ 6ನೇ ಗ್ಯಾರಂಟಿ : ಒಂದು ಲಕ್ಷ ಕೊಟ್ರೆ ಬಡವರಿಗೆ ಮನೆ : ಜಮೀರ್ – vishwanews24

ಕಾಂಗ್ರೆಸ್‌ನ 6ನೇ ಗ್ಯಾರಂಟಿ : ಒಂದು ಲಕ್ಷ ಕೊಟ್ರೆ ಬಡವರಿಗೆ ಮನೆ : ಜಮೀರ್

ಬೆಂಗಳೂರು : ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಟೆಂಡರ್ ಆಹ್ವಾನಿಸಿ ಅನುಷ್ಠಾನಗೊಳಿಸುತ್ತಿರುವ ಮನೆಗಳ‌ ಪೈಕಿ ಮುಕ್ತಾಯ ಹಂತದಲ್ಲಿರುವ 48,796 ಮನೆಗಳ ಪ್ರತಿ ಫಲಾನುಭವಿಗಳಿಂದ 1 ಲಕ್ಷ ರೂ. ಮಾತ್ರ ಸಂಗ್ರಹಿಸಿ ಉಳಿದ ಮೊತ್ತವನ್ನು ರಾಜ್ಯ ಸರ್ಕಾರದಿಂದ ಭರಿಸಲು ಸಂಪುಟ ತೀರ್ಮಾನಿಸಿದೆ.

ಇಂದು (ಡಿಸೆಂಬರ್ 21) ನಡೆದ ಮಹತ್ವದ ಸಂಪುಟ ಸಭೆ ಬಳಿಕ ಕಾನೂನು ಮತ್ತು ಸಂಸದೀಯ ಖಾತೆ ಸಚಿವ ಎಚ್‌.ಕೆ. ಪಾಟೀಲ್‌ ಜೊತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಮೀರ್ ಅಹ್ಮದ್ ಖಾನ್ , ಪ್ರಧಾನ‌ ಮಂತ್ರಿ ಆವಾಸ್‌ ಯೋಜನೆಯಡಿ ಬಡವರಿಗೆ ಮನೆ ಹಂಚುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಫಲಾನುಭವಿಗಳು ಕೇವಲ ಒಂದು ಲಕ್ಷ ರೂ. ಪಾವತಿಸಿ ಮನೆಯನ್ನು ಪಡೆಯಬಹುದು. ಇದು ಕಾಂಗ್ರೆಸ್‌ ಚುನಾವಣೆಗೆ ಮುನ್ನ ಘೋಷಿಸದೇ ಇರುವ ಆರನೇ ಗ್ಯಾರಂಟಿ ಎಂದು ಪರಿಗಣಿಸಬಹುದು ಎಂದು ಹೇಳಿದರು.

ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಡಿ 2015ರಲ್ಲಿ 1,80,253 ಮನೆಗಳು ಮಂಜೂರಾಗಿದ್ದವು. ಆದರೆ, 2015ರಿಂದ 2023ರ ವರೆಗೂ ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಡಿ ಒಂದೇ ಒಂದು ಮನೆಯನ್ನು ಕೊಡಲು ಸಾಧ್ಯವಾಗಿಲ್ಲ. 2015ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಇದ್ದಾಗ ಪ್ರತಿ ವರ್ಷವೂ ಒಂದಷ್ಟು ಮನೆಗಳಿಗೆ ಮಂಜೂರಾತಿ ನೀಡಲಾಗಿತ್ತು. 2018ರಿಂದ ಒಂದೇ ಒಂದು ಮನೆಯನ್ನು ಮಂಜೂರಾತಿ ನೀಡಲಾಗಿಲ್ಲ.

ಆವಾಸ್‌ ಯೋಜನೆಯ ಪ್ರಕಾರ ಫಲಾನುಭವಿಗಳು 4.5 ಲಕ್ಷ ರೂ. ಪಾವತಿಸಬೇಕು. ಕೇಂದ್ರ ಸರಕಾರ 1.5 ಲಕ್ಷ ರೂ. ನೀಡುತ್ತದೆ, ರಾಜ್ಯ ಸರಕಾರ ಒಂದು ಲಕ್ಷ ರೂ. ನೀಡಬೇಕು. ಆದರೆ, ರಾಜ್ಯ ಸರ್ಕಾರ ಇದುವರೆಗೂ ತನ್ನ ಪಾಲಿನ ಹಣ ಬಿಡುಗಡೆ ಮಾಡಿಲ್ಲ. ಜತೆಗೆ ಹಲವಾರು ಫಲಾನುಭವಿಗಳು 4.5 ಲಕ್ಷ ರೂ. ಕಟ್ಟಲು ಸಾಧ್ಯವಾಗದ ಸ್ಥಿತಿಯಲ್ಲಿದ್ದಾರೆ.

ಹೊಸ ಯೋಜನೆಯ ಪ್ರಕಾರ ರಾಜ್ಯ ಸರ್ಕಾರ 500 ಕೋಟಿ ರೂ. ಬಿಡುಗಡೆ ಮಾಡಲು ಒಪ್ಪಿದೆ. ಸಿಎಂ ಸಿದ್ದರಾಮಯ್ಯ ಅವರು ಈ ಹಣ ಬಿಡುಗಡೆಗೆ ಒಪ್ಪಿದ್ದಾರೆ. ಈಗ ಮನೆ ಪಡೆಯುವ ಫಲಾನುಭವಿಗಳು ಕೇವಲ ಒಂದು ಲಕ್ಷ ರೂ. ಕಟ್ಟಿದರೆ ಸಾಕು. ಕೇಂದ್ರ ಸರ್ಕಾರ ಒಂದುವರೆ ಲಕ್ಷವನ್ನು ಕೊಡುತ್ತದೆಯಾದರೂ ಈ ಮೊತ್ತವನ್ನು ಅದು ಜಿಎಸ್ಟಿ ಮೂಲಕ ಮರಳಿ ಪಡೆಯುತ್ತದೆ ಎಂದು ಜಮೀರ್‌ ಅಹಮ್ಮದ್ ಖಾನ್‌ ಹೇಳಿದರು.

ರಾಜ್ಯದಲ್ಲಿ 1.8 ಲಕ್ಷ ಮನೆಗಳು ನಿರ್ಮಾಣ ಹಂತದಲ್ಲಿವೆ. ಇದೀಗ ಇವುಗಳನ್ನು ಪೂರ್ಣಗೊಳಿಸಲು 6,170 ಕೋಟಿ ರೂ ಬೇಕಾಗಿದೆ. ಇದರ ಪೈಕಿ 5,403 ಕೋಟಿ ಫಲಾನುಭವಿಗಳ ಮೂಲಕ ಬರಬೇಕಿದೆ.

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

1 day ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

1 day ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

2 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

2 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

2 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

2 days ago