ಬೆಂಗಳೂರು : ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಟೆಂಡರ್ ಆಹ್ವಾನಿಸಿ ಅನುಷ್ಠಾನಗೊಳಿಸುತ್ತಿರುವ ಮನೆಗಳ ಪೈಕಿ ಮುಕ್ತಾಯ ಹಂತದಲ್ಲಿರುವ 48,796 ಮನೆಗಳ ಪ್ರತಿ ಫಲಾನುಭವಿಗಳಿಂದ 1 ಲಕ್ಷ ರೂ. ಮಾತ್ರ ಸಂಗ್ರಹಿಸಿ ಉಳಿದ ಮೊತ್ತವನ್ನು ರಾಜ್ಯ ಸರ್ಕಾರದಿಂದ ಭರಿಸಲು ಸಂಪುಟ ತೀರ್ಮಾನಿಸಿದೆ.
ಇಂದು (ಡಿಸೆಂಬರ್ 21) ನಡೆದ ಮಹತ್ವದ ಸಂಪುಟ ಸಭೆ ಬಳಿಕ ಕಾನೂನು ಮತ್ತು ಸಂಸದೀಯ ಖಾತೆ ಸಚಿವ ಎಚ್.ಕೆ. ಪಾಟೀಲ್ ಜೊತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಮೀರ್ ಅಹ್ಮದ್ ಖಾನ್ , ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಬಡವರಿಗೆ ಮನೆ ಹಂಚುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಫಲಾನುಭವಿಗಳು ಕೇವಲ ಒಂದು ಲಕ್ಷ ರೂ. ಪಾವತಿಸಿ ಮನೆಯನ್ನು ಪಡೆಯಬಹುದು. ಇದು ಕಾಂಗ್ರೆಸ್ ಚುನಾವಣೆಗೆ ಮುನ್ನ ಘೋಷಿಸದೇ ಇರುವ ಆರನೇ ಗ್ಯಾರಂಟಿ ಎಂದು ಪರಿಗಣಿಸಬಹುದು ಎಂದು ಹೇಳಿದರು.
ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 2015ರಲ್ಲಿ 1,80,253 ಮನೆಗಳು ಮಂಜೂರಾಗಿದ್ದವು. ಆದರೆ, 2015ರಿಂದ 2023ರ ವರೆಗೂ ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಡಿ ಒಂದೇ ಒಂದು ಮನೆಯನ್ನು ಕೊಡಲು ಸಾಧ್ಯವಾಗಿಲ್ಲ. 2015ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದ್ದಾಗ ಪ್ರತಿ ವರ್ಷವೂ ಒಂದಷ್ಟು ಮನೆಗಳಿಗೆ ಮಂಜೂರಾತಿ ನೀಡಲಾಗಿತ್ತು. 2018ರಿಂದ ಒಂದೇ ಒಂದು ಮನೆಯನ್ನು ಮಂಜೂರಾತಿ ನೀಡಲಾಗಿಲ್ಲ.
ಆವಾಸ್ ಯೋಜನೆಯ ಪ್ರಕಾರ ಫಲಾನುಭವಿಗಳು 4.5 ಲಕ್ಷ ರೂ. ಪಾವತಿಸಬೇಕು. ಕೇಂದ್ರ ಸರಕಾರ 1.5 ಲಕ್ಷ ರೂ. ನೀಡುತ್ತದೆ, ರಾಜ್ಯ ಸರಕಾರ ಒಂದು ಲಕ್ಷ ರೂ. ನೀಡಬೇಕು. ಆದರೆ, ರಾಜ್ಯ ಸರ್ಕಾರ ಇದುವರೆಗೂ ತನ್ನ ಪಾಲಿನ ಹಣ ಬಿಡುಗಡೆ ಮಾಡಿಲ್ಲ. ಜತೆಗೆ ಹಲವಾರು ಫಲಾನುಭವಿಗಳು 4.5 ಲಕ್ಷ ರೂ. ಕಟ್ಟಲು ಸಾಧ್ಯವಾಗದ ಸ್ಥಿತಿಯಲ್ಲಿದ್ದಾರೆ.
ಹೊಸ ಯೋಜನೆಯ ಪ್ರಕಾರ ರಾಜ್ಯ ಸರ್ಕಾರ 500 ಕೋಟಿ ರೂ. ಬಿಡುಗಡೆ ಮಾಡಲು ಒಪ್ಪಿದೆ. ಸಿಎಂ ಸಿದ್ದರಾಮಯ್ಯ ಅವರು ಈ ಹಣ ಬಿಡುಗಡೆಗೆ ಒಪ್ಪಿದ್ದಾರೆ. ಈಗ ಮನೆ ಪಡೆಯುವ ಫಲಾನುಭವಿಗಳು ಕೇವಲ ಒಂದು ಲಕ್ಷ ರೂ. ಕಟ್ಟಿದರೆ ಸಾಕು. ಕೇಂದ್ರ ಸರ್ಕಾರ ಒಂದುವರೆ ಲಕ್ಷವನ್ನು ಕೊಡುತ್ತದೆಯಾದರೂ ಈ ಮೊತ್ತವನ್ನು ಅದು ಜಿಎಸ್ಟಿ ಮೂಲಕ ಮರಳಿ ಪಡೆಯುತ್ತದೆ ಎಂದು ಜಮೀರ್ ಅಹಮ್ಮದ್ ಖಾನ್ ಹೇಳಿದರು.
ರಾಜ್ಯದಲ್ಲಿ 1.8 ಲಕ್ಷ ಮನೆಗಳು ನಿರ್ಮಾಣ ಹಂತದಲ್ಲಿವೆ. ಇದೀಗ ಇವುಗಳನ್ನು ಪೂರ್ಣಗೊಳಿಸಲು 6,170 ಕೋಟಿ ರೂ ಬೇಕಾಗಿದೆ. ಇದರ ಪೈಕಿ 5,403 ಕೋಟಿ ಫಲಾನುಭವಿಗಳ ಮೂಲಕ ಬರಬೇಕಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…