ಬೆಂಗಳೂರು: ಕಾಂಗ್ರೆಸ್ ಶಾಸಕರು ನಿಮ್ಮ ಸರ್ಕಾರ ತೆಗೆಯುವುದಿಲ್ಲ. ರೈತರೇ ನಿಮ್ಮ ಸರ್ಕಾರವನ್ನು ಕಿತ್ತು ಒಗೆಯುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಎಂ ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಕೈ ನಾಯಕರ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಹಸಿರು ಶಾಲು ಹಾಕಿಕೊಂಡು ರೈತರ ಪರವಾಗಿ ಇದ್ದೇನೆ ಎಂದು ಬೂಟಾಟಿಕೆ ಮಾಡ್ತಾರೆ. ಆದರೆ ರಾಜ್ಯದ ರೈತರು ನಿಮ್ಮ ಸರ್ಕಾರವನ್ನು ಕಿತ್ತು ಒಗೆಯುತ್ತಾರೆ. ಈ ಕಾನೂನು ಹಿಂಪಡೆಯುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಗುಡುಗಿದರು.
ಈಗಾಗಲೇ ಆನೇಕಲ್ ಮತ್ತು ಕನಕಪುರ ಭಾಗದ ರೈತರು ಸಮಸ್ಯೆ ಅನುಭವಿಸುತ್ತಿದ್ದಾರೆ. ಬಹುರಾಷ್ಟ್ರೀಯ ಕಂಪನಿಗಳು ಬೀಜ ಕೊಟ್ಟು ಬೆಲೆ ಬಳಿಕ ಕ್ವಾಲಿಟಿ ಸರಿಯಿಲ್ಲ ಅಂತ ಹೇಳಿದ್ದವು. ರೈತನ ರಕ್ಷಣೆ ನಮ್ಮ ಹೊಣೆ. ಹೀಗಾಗಿ ಪ್ರತಿಭಟನೆಗೆ ಕರೆ ನೀಡಿದ್ದು, ಹೋರಾಟಕ್ಕೆ ಬೆಂಬಲ ನೀಡಿದ ಎಲ್ಲರಿಗೂ ವಂದನೆಗಳು ಎಂದು ತಿಳಿಸಿದರು.
ಭೂ ಸುಧಾರಣಾ ಕಾಯ್ದೆಯನ್ನು ತಂದಿದ್ದು ಕಾಂಗ್ರೆಸ್. ನಾವು ಯಾವುದೇ ಇಂತಹ ರೈತ ವಿರೋಧಿ ಕಾನೂನು ತರಲಿಲ್ಲ. ಅರಣ್ಯ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ಎಸ್ಸಿ ಮತ್ತು ಎಸ್ಟಿ ಅವರಿಗೆ ಜಮೀನು ಕೊಟ್ಟೆವು. ಕಾಂಗ್ರೆಸ್ಸಿನದ್ದು ಏನೇ ಇದ್ದರೂ ಕೊಡುವ ಇತಿಹಾಸ. ಬಿಜೆಪಿ ಇತಿಹಾಸ ಕಿತ್ತುಕೊಳ್ಳುವುದು. ರೈತರ ಜಮೀನು ಕಿತ್ತುಕೊಳ್ಳಲು ಈಗ ಈ ರೀತಿಯ ಕಾನೂನು ಮಾಡಲು ಹೊರಟಿದೆ ಎಂದು ಕಿಡಿಕಾರಿದರು.
ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್, ರಾಮಲಿಂಗಾ ರೆಡ್ಡಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…