ಹಾಸನ :‘ಕಾಂಗ್ರೆಸ್ ಪಕ್ಷ 137 ವರ್ಷ ಇತಿಹಾಸವನ್ನು ಹೊಂದಿದೆ. ಇದನ್ನ ಅಲುಗಾಡಿಸಲು ಆಗಿನ ಬ್ರಿಟಿಷರಿಗೆ ಸಾಧ್ಯವಾಗಲಿಲ್ಲ. ಇನ್ನು ಬಿಜೆಪಿಯಿಂದ ಕಾಂಗ್ರೆಸ್ ಪಕ್ಷವನ್ನ ಹೊಡೆಯಲು ಸಾಧ್ಯನಾ…?? ಎಂದು ಕೇಂದ್ರ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಟೀಕಿಸಿದರು.
88ನೇ ಮಹಾಮಸ್ತಕಾಭಿಷೇಕದ ಕೊನೆಯ ವಿಸರ್ಜನಾ ಕಾರ್ಯಕ್ರಮಕ್ಕೆ ಶ್ರವಣಬೆಳಗೊಳಕ್ಕೆ ಆಗಮಿಸಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ ಮಾಜಿ ಸಿಎಂ ಮೊಯ್ಲಿ, ‘ಸಮ್ಮಿಶ್ರ ಸರ್ಕಾರ 5ವರ್ಷ ಪೂರೈಸುವಂತೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾನ ಮಾಡಿದ್ದಾರೆ. ಹಾಗಾಗಿ ಒಬ್ಬರಿಂದ ಅಥವಾ ಇಬ್ಬರಿಂದ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲ. ವಾಮಾಚಾರದಿಂದ ಸರ್ಕಾರವನ್ನು ಉಳಿಸಲು ಯತ್ನಿಸಿದರೆ ಅವರು ಯಾರು ಉದ್ಧಾರ ಆಗೋದಿಲ್ಲ. ನಾನು ಇಂದು ಗೊಮ್ಮಟನ ಸನ್ನಿಧಿಯಲ್ಲಿ ಮಾತನಾಡುತ್ತಿದ್ದು ಬಿಜೆಪಿಯವರಿಗೆ ಶಾಪ ತಟ್ಟುತ್ತದೆ’ ಎನ್ನುವ ಮೂಲಕ ಸರ್ಕಾರ ಸ್ಥಿರವಾಗಿರುತ್ತದೆ ಅಂತ ಮಾಜಿ ಸಿಎಂ ವೀರಪ್ಪಮೋಯ್ಲಿ ವಿಶ್ವಾಸ ವ್ಯಕ್ತಪಡಿಸಿದರು.
ಸರ್ಕಾರವನ್ನ ಬೀಳಿಸುವ ಪ್ರಯತ್ನ ಮಾಡಿದರೆ, ಬಿಜೆಪಿಗೆ ಕೆಟ್ಟ ಹೆಸರು ಬರುವುದು ನಿಶ್ಚಿತ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಎನ್.ಡಿ.ಎ. ತನ್ನ ಅಸ್ತಿತ್ವವನ್ನು ಕಳೆದುಕೊಳ್ಳಲಿದ್ದು, ರಾಜ್ಯದಲ್ಲಿ ಕೂಡ 4-5 ಸ್ಥಾನಗಳನ್ನು ಪಡೆದರೆ ಹೆಚ್ಚು’ ಅಂತ ಭವಿಷ್ಯ ನುಡಿದರು.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…