Featured

ಕಾಂಗ್ರೆಸ್​ ಭಾರತ ಮತ್ತು ಪಾಕಿಸ್ತಾನವನ್ನು ಇಬ್ಬಾಗ ಮಾಡಿದ್ದೇ ಇಷ್ಟೆಲ್ಲಾ ಬೆಳವಣಿಗೆಗಳಿಗೆ ಕಾರಣ : ನಳಿನ್​​ ಕುಮಾರ್​​​ ಕಟೀಲ್ -Vishwanews24

ಬೆಂಗಳೂರು: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್​ ಭಾರತ ಮತ್ತು ಪಾಕಿಸ್ತಾನವನ್ನು ಇಬ್ಬಾಗ ಮಾಡಿದ್ದೇ ಇಷ್ಟೆಲ್ಲಾ ಬೆಳವಣಿಗೆಗಳಿಗೆ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​​ ಕುಮಾರ್​​​ ಕಟೀಲ್​​​​ ಹೇಳಿಕೆ ನೀಡಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​​​ ಕುಮಾರ್​​ ಕಟೀಲ್​​​, “ಜಮ್ಮು-ಕಾಶ್ಮೀರ 370 ನೇ ವಿಧಿ ರದ್ದು ಮಾಡುವುದು; ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಮಾಡುವುದು; ರಾಮಮಂದಿರ ನಿರ್ಮಾಣ ಮಾಡುವ ಭರವಸೆ ಪ್ರಣಾಳಿಯಲ್ಲಿ ನೀಡಿದ್ದೆವು. ಅಂತೆಯೀಗ ಮೂರು ವಿಚಾರಗಳನ್ನು ಅನುಷ್ಠಾನಗೊಳಿಸಿದ್ದೇವೆ ಎಂಬ ಹೆಮ್ಮ ನನಗಿದೆ” ಎಂದರು.

ಭಾರತ ಮತ್ತು ಪಾಕಿಸ್ತಾನವನ್ನು ಎರಡನ್ನಾಗಿ ವಿಭಜಿಸಿದ ಕಾಂಗ್ರೆಸ್​​ ಈ ಎಲ್ಲಾ ಬೆಳವಣಿಗೆಗಳಿಗೆ ಕಾರಣವಾಗಿದೆ. ಭಾರತವನ್ನು ಜಾತ್ಯತೀತ ರಾಷ್ಟ್ರ ಎಂದು ಕರೆಯುತ್ತಿದ್ದರೆ, ಪಾಕಿಸ್ತಾನವನ್ನು ಇಸ್ಲಾಮಿಕ್​​ ರಾಷ್ಟ್ರ ಎನ್ನಲಾಗುತ್ತಿತ್ತು. ಆದರೂ, ಭಾರತದಲ್ಲಿ ಇಲ್ಲಿಯವರೆಗೂ ಅಲ್ಪಸಂಖ್ಯಾತ ಸಮುದಾಯದವರು ರಾಷ್ಟ್ರಪತಿ, ಮುಖ್ಯಮಂತ್ರಿ ಮತ್ತು ಸುಪ್ರೀಂಕೋರ್ಟ್​​ ನ್ಯಾಯಮೂರ್ತಿಯಾಗಲು ಅವಕಾಶ ನೀಡಿದ್ದೇವೆ. ಭಾರತ ಎಲ್ಲಾ ಧರ್ಮಗಳಿಗೂ ಆಶ್ರಯ ನೀಡಿದೆ ಎಂದರು.

ಹಾಗೆಯೇ ಕಳೆದ 6 ವರ್ಷದಿಂದ ರಾಜಕೀಯ ಮಾಡಲು ಕಾಂಗ್ರೆಸ್​ಗೆ ಯಾವ ವಿಷಯಗಳು ಸಿಕ್ಕಿರಲಿಲ್ಲ. ಈಗ ಪೌರತ್ವ ಕಾಯ್ದೆ ವಿಚಾರವಾಗಿ ದೇಶದಲ್ಲಿ ಬೆಂಕಿ ಹೊತ್ತಿಸುವ ಕಾರ್ಯ ಕಾಂಗ್ರೆಸ್ಸಿಗರು​ ಮಾಡುತ್ತಿದ್ದಾರೆ. ಈಗಾಗಲೇ ಕಾಂಗ್ರೆಸ್​​ ಎಲ್ಲಾ ರೀತಿಯಲ್ಲೂ ದಿವಾಳಿಯಾಗಿದೆ. ಈ ದಿವಾಳಿತನ ಸರಿಪಡಿಸಿಕೊಳ್ಳಲು ಕಾಯ್ದೆಯನ್ನಿಟ್ಟುಕೊಂಡು ತಂತ್ರಗಾರಿಕೆ ನಡೆಸುತ್ತಿದೆ ಎಂದು ಟೀಕಿಸಿದ್ದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

10 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

10 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

10 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

11 hours ago