Featured

ಕಾಂಗ್ರೆಸ್​ ಭಾರತ ಮತ್ತು ಪಾಕಿಸ್ತಾನವನ್ನು ಇಬ್ಬಾಗ ಮಾಡಿದ್ದೇ ಇಷ್ಟೆಲ್ಲಾ ಬೆಳವಣಿಗೆಗಳಿಗೆ ಕಾರಣ : ನಳಿನ್​​ ಕುಮಾರ್​​​ ಕಟೀಲ್ -Vishwanews24

ಬೆಂಗಳೂರು: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್​ ಭಾರತ ಮತ್ತು ಪಾಕಿಸ್ತಾನವನ್ನು ಇಬ್ಬಾಗ ಮಾಡಿದ್ದೇ ಇಷ್ಟೆಲ್ಲಾ ಬೆಳವಣಿಗೆಗಳಿಗೆ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​​ ಕುಮಾರ್​​​ ಕಟೀಲ್​​​​ ಹೇಳಿಕೆ ನೀಡಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​​​ ಕುಮಾರ್​​ ಕಟೀಲ್​​​, “ಜಮ್ಮು-ಕಾಶ್ಮೀರ 370 ನೇ ವಿಧಿ ರದ್ದು ಮಾಡುವುದು; ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಮಾಡುವುದು; ರಾಮಮಂದಿರ ನಿರ್ಮಾಣ ಮಾಡುವ ಭರವಸೆ ಪ್ರಣಾಳಿಯಲ್ಲಿ ನೀಡಿದ್ದೆವು. ಅಂತೆಯೀಗ ಮೂರು ವಿಚಾರಗಳನ್ನು ಅನುಷ್ಠಾನಗೊಳಿಸಿದ್ದೇವೆ ಎಂಬ ಹೆಮ್ಮ ನನಗಿದೆ” ಎಂದರು.

ಭಾರತ ಮತ್ತು ಪಾಕಿಸ್ತಾನವನ್ನು ಎರಡನ್ನಾಗಿ ವಿಭಜಿಸಿದ ಕಾಂಗ್ರೆಸ್​​ ಈ ಎಲ್ಲಾ ಬೆಳವಣಿಗೆಗಳಿಗೆ ಕಾರಣವಾಗಿದೆ. ಭಾರತವನ್ನು ಜಾತ್ಯತೀತ ರಾಷ್ಟ್ರ ಎಂದು ಕರೆಯುತ್ತಿದ್ದರೆ, ಪಾಕಿಸ್ತಾನವನ್ನು ಇಸ್ಲಾಮಿಕ್​​ ರಾಷ್ಟ್ರ ಎನ್ನಲಾಗುತ್ತಿತ್ತು. ಆದರೂ, ಭಾರತದಲ್ಲಿ ಇಲ್ಲಿಯವರೆಗೂ ಅಲ್ಪಸಂಖ್ಯಾತ ಸಮುದಾಯದವರು ರಾಷ್ಟ್ರಪತಿ, ಮುಖ್ಯಮಂತ್ರಿ ಮತ್ತು ಸುಪ್ರೀಂಕೋರ್ಟ್​​ ನ್ಯಾಯಮೂರ್ತಿಯಾಗಲು ಅವಕಾಶ ನೀಡಿದ್ದೇವೆ. ಭಾರತ ಎಲ್ಲಾ ಧರ್ಮಗಳಿಗೂ ಆಶ್ರಯ ನೀಡಿದೆ ಎಂದರು.

ಹಾಗೆಯೇ ಕಳೆದ 6 ವರ್ಷದಿಂದ ರಾಜಕೀಯ ಮಾಡಲು ಕಾಂಗ್ರೆಸ್​ಗೆ ಯಾವ ವಿಷಯಗಳು ಸಿಕ್ಕಿರಲಿಲ್ಲ. ಈಗ ಪೌರತ್ವ ಕಾಯ್ದೆ ವಿಚಾರವಾಗಿ ದೇಶದಲ್ಲಿ ಬೆಂಕಿ ಹೊತ್ತಿಸುವ ಕಾರ್ಯ ಕಾಂಗ್ರೆಸ್ಸಿಗರು​ ಮಾಡುತ್ತಿದ್ದಾರೆ. ಈಗಾಗಲೇ ಕಾಂಗ್ರೆಸ್​​ ಎಲ್ಲಾ ರೀತಿಯಲ್ಲೂ ದಿವಾಳಿಯಾಗಿದೆ. ಈ ದಿವಾಳಿತನ ಸರಿಪಡಿಸಿಕೊಳ್ಳಲು ಕಾಯ್ದೆಯನ್ನಿಟ್ಟುಕೊಂಡು ತಂತ್ರಗಾರಿಕೆ ನಡೆಸುತ್ತಿದೆ ಎಂದು ಟೀಕಿಸಿದ್ದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

10 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

11 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

13 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

13 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

14 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

14 hours ago