ಬೆಂಗಳೂರು: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಭಾರತ ಮತ್ತು ಪಾಕಿಸ್ತಾನವನ್ನು ಇಬ್ಬಾಗ ಮಾಡಿದ್ದೇ ಇಷ್ಟೆಲ್ಲಾ ಬೆಳವಣಿಗೆಗಳಿಗೆ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, “ಜಮ್ಮು-ಕಾಶ್ಮೀರ 370 ನೇ ವಿಧಿ ರದ್ದು ಮಾಡುವುದು; ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಮಾಡುವುದು; ರಾಮಮಂದಿರ ನಿರ್ಮಾಣ ಮಾಡುವ ಭರವಸೆ ಪ್ರಣಾಳಿಯಲ್ಲಿ ನೀಡಿದ್ದೆವು. ಅಂತೆಯೀಗ ಮೂರು ವಿಚಾರಗಳನ್ನು ಅನುಷ್ಠಾನಗೊಳಿಸಿದ್ದೇವೆ ಎಂಬ ಹೆಮ್ಮ ನನಗಿದೆ” ಎಂದರು.
ಭಾರತ ಮತ್ತು ಪಾಕಿಸ್ತಾನವನ್ನು ಎರಡನ್ನಾಗಿ ವಿಭಜಿಸಿದ ಕಾಂಗ್ರೆಸ್ ಈ ಎಲ್ಲಾ ಬೆಳವಣಿಗೆಗಳಿಗೆ ಕಾರಣವಾಗಿದೆ. ಭಾರತವನ್ನು ಜಾತ್ಯತೀತ ರಾಷ್ಟ್ರ ಎಂದು ಕರೆಯುತ್ತಿದ್ದರೆ, ಪಾಕಿಸ್ತಾನವನ್ನು ಇಸ್ಲಾಮಿಕ್ ರಾಷ್ಟ್ರ ಎನ್ನಲಾಗುತ್ತಿತ್ತು. ಆದರೂ, ಭಾರತದಲ್ಲಿ ಇಲ್ಲಿಯವರೆಗೂ ಅಲ್ಪಸಂಖ್ಯಾತ ಸಮುದಾಯದವರು ರಾಷ್ಟ್ರಪತಿ, ಮುಖ್ಯಮಂತ್ರಿ ಮತ್ತು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಲು ಅವಕಾಶ ನೀಡಿದ್ದೇವೆ. ಭಾರತ ಎಲ್ಲಾ ಧರ್ಮಗಳಿಗೂ ಆಶ್ರಯ ನೀಡಿದೆ ಎಂದರು.
ಹಾಗೆಯೇ ಕಳೆದ 6 ವರ್ಷದಿಂದ ರಾಜಕೀಯ ಮಾಡಲು ಕಾಂಗ್ರೆಸ್ಗೆ ಯಾವ ವಿಷಯಗಳು ಸಿಕ್ಕಿರಲಿಲ್ಲ. ಈಗ ಪೌರತ್ವ ಕಾಯ್ದೆ ವಿಚಾರವಾಗಿ ದೇಶದಲ್ಲಿ ಬೆಂಕಿ ಹೊತ್ತಿಸುವ ಕಾರ್ಯ ಕಾಂಗ್ರೆಸ್ಸಿಗರು ಮಾಡುತ್ತಿದ್ದಾರೆ. ಈಗಾಗಲೇ ಕಾಂಗ್ರೆಸ್ ಎಲ್ಲಾ ರೀತಿಯಲ್ಲೂ ದಿವಾಳಿಯಾಗಿದೆ. ಈ ದಿವಾಳಿತನ ಸರಿಪಡಿಸಿಕೊಳ್ಳಲು ಕಾಯ್ದೆಯನ್ನಿಟ್ಟುಕೊಂಡು ತಂತ್ರಗಾರಿಕೆ ನಡೆಸುತ್ತಿದೆ ಎಂದು ಟೀಕಿಸಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…