Featured

ಕಾಂಗ್ರೆಸ್​ ಭಾರತ ಮತ್ತು ಪಾಕಿಸ್ತಾನವನ್ನು ಇಬ್ಬಾಗ ಮಾಡಿದ್ದೇ ಇಷ್ಟೆಲ್ಲಾ ಬೆಳವಣಿಗೆಗಳಿಗೆ ಕಾರಣ : ನಳಿನ್​​ ಕುಮಾರ್​​​ ಕಟೀಲ್ -Vishwanews24

ಬೆಂಗಳೂರು: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್​ ಭಾರತ ಮತ್ತು ಪಾಕಿಸ್ತಾನವನ್ನು ಇಬ್ಬಾಗ ಮಾಡಿದ್ದೇ ಇಷ್ಟೆಲ್ಲಾ ಬೆಳವಣಿಗೆಗಳಿಗೆ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​​ ಕುಮಾರ್​​​ ಕಟೀಲ್​​​​ ಹೇಳಿಕೆ ನೀಡಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​​​ ಕುಮಾರ್​​ ಕಟೀಲ್​​​, “ಜಮ್ಮು-ಕಾಶ್ಮೀರ 370 ನೇ ವಿಧಿ ರದ್ದು ಮಾಡುವುದು; ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಮಾಡುವುದು; ರಾಮಮಂದಿರ ನಿರ್ಮಾಣ ಮಾಡುವ ಭರವಸೆ ಪ್ರಣಾಳಿಯಲ್ಲಿ ನೀಡಿದ್ದೆವು. ಅಂತೆಯೀಗ ಮೂರು ವಿಚಾರಗಳನ್ನು ಅನುಷ್ಠಾನಗೊಳಿಸಿದ್ದೇವೆ ಎಂಬ ಹೆಮ್ಮ ನನಗಿದೆ” ಎಂದರು.

ಭಾರತ ಮತ್ತು ಪಾಕಿಸ್ತಾನವನ್ನು ಎರಡನ್ನಾಗಿ ವಿಭಜಿಸಿದ ಕಾಂಗ್ರೆಸ್​​ ಈ ಎಲ್ಲಾ ಬೆಳವಣಿಗೆಗಳಿಗೆ ಕಾರಣವಾಗಿದೆ. ಭಾರತವನ್ನು ಜಾತ್ಯತೀತ ರಾಷ್ಟ್ರ ಎಂದು ಕರೆಯುತ್ತಿದ್ದರೆ, ಪಾಕಿಸ್ತಾನವನ್ನು ಇಸ್ಲಾಮಿಕ್​​ ರಾಷ್ಟ್ರ ಎನ್ನಲಾಗುತ್ತಿತ್ತು. ಆದರೂ, ಭಾರತದಲ್ಲಿ ಇಲ್ಲಿಯವರೆಗೂ ಅಲ್ಪಸಂಖ್ಯಾತ ಸಮುದಾಯದವರು ರಾಷ್ಟ್ರಪತಿ, ಮುಖ್ಯಮಂತ್ರಿ ಮತ್ತು ಸುಪ್ರೀಂಕೋರ್ಟ್​​ ನ್ಯಾಯಮೂರ್ತಿಯಾಗಲು ಅವಕಾಶ ನೀಡಿದ್ದೇವೆ. ಭಾರತ ಎಲ್ಲಾ ಧರ್ಮಗಳಿಗೂ ಆಶ್ರಯ ನೀಡಿದೆ ಎಂದರು.

ಹಾಗೆಯೇ ಕಳೆದ 6 ವರ್ಷದಿಂದ ರಾಜಕೀಯ ಮಾಡಲು ಕಾಂಗ್ರೆಸ್​ಗೆ ಯಾವ ವಿಷಯಗಳು ಸಿಕ್ಕಿರಲಿಲ್ಲ. ಈಗ ಪೌರತ್ವ ಕಾಯ್ದೆ ವಿಚಾರವಾಗಿ ದೇಶದಲ್ಲಿ ಬೆಂಕಿ ಹೊತ್ತಿಸುವ ಕಾರ್ಯ ಕಾಂಗ್ರೆಸ್ಸಿಗರು​ ಮಾಡುತ್ತಿದ್ದಾರೆ. ಈಗಾಗಲೇ ಕಾಂಗ್ರೆಸ್​​ ಎಲ್ಲಾ ರೀತಿಯಲ್ಲೂ ದಿವಾಳಿಯಾಗಿದೆ. ಈ ದಿವಾಳಿತನ ಸರಿಪಡಿಸಿಕೊಳ್ಳಲು ಕಾಯ್ದೆಯನ್ನಿಟ್ಟುಕೊಂಡು ತಂತ್ರಗಾರಿಕೆ ನಡೆಸುತ್ತಿದೆ ಎಂದು ಟೀಕಿಸಿದ್ದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago