Featured

ಕಾಂಗ್ರೆಸ್‌ಗೆ ಗುಡ್‌ಬೈ : ಬಾಲಿವುಡ್‌ ನಟಿ ಊರ್ಮಿಳಾ ಮಾತೋಂಡ್ಕರ್ ಶಿವಸೇನೆಗೆ.. Vishwanews24

ಕಾಂಗ್ರೆಸ್‌ಗೆ ಗುಡ್‌ಬೈ : ಬಾಲಿವುಡ್‌ ನಟಿ ಊರ್ಮಿಳಾ ಮಾತೋಂಡ್ಕರ್ ಶಿವಸೇನೆಗೆ.. Vishwanews24

ಮುಂಬಯಿ: ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಡಿಸಂಬರ್ 1 ರಂದು ಶಿವಸೇನೆಗೆ ಸೇರಲಿದ್ದಾರೆ. ನಟಿ ಊರ್ಮಿಳಾ ಮಂಗಳವಾರ ಶಿವಸೇನೆ ಪಕ್ಷ ಸೇರಲಿದ್ದಾರೆ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಆಪ್ತ ಹರ್ಷಲ್ ಪ್ರಧಾನ್ ತಿಳಿಸಿದ್ದಾರೆ.

2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನಿಂದ ಮುಂಬಯಿ ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಊರ್ಮಿಳಾ ಸೋತಿದ್ದರು. ನಂತರ ಕಾಂಗ್ರೆಸ್ ಪಕ್ಷದ ಆಂತರಿಕ ಭಿನ್ನಾಭಿಪ್ರಾಯದಿಂದ ಬೇಸತ್ತಿದ್ದ ಊರ್ಮಿಳಾ ಪಕ್ಷ ತೊರೆದಿದ್ದರು.

ಊರ್ಮಿಳಾ ಹೆಸರನ್ನು ರಾಜ್ಯಪಾಲರ ಕೋಟಾದಿಂದ ವಿಧಾನ ಪರಿಷತ್ ಗೆ ನಾಮನಿರ್ದೇಶನ ಮಾಡಲು ಶಿವಸೇನೆಯು ಗವರ್ನರ್ ಬಿ ಎಸ್ ಕೊಶ್ಯರಿಗೆ ಕಳುಹಿಸಲಾಗಿದೆ.

ಇತರ 11 ಜನರ ಹೆಸರನ್ನು ರಾಜ್ಯಪಾಲರ ಕೋಟಾದಿಂದ ನಾಮನಿರ್ದೇಶನ ಮಾಡಲು ಮೂರು ಪಕ್ಷಗಳ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವು ರವಾನಿಸಿದೆ. ಈ 12 ಮಂದಿ ಪಟ್ಟಿಯನ್ನು ರಾಜ್ಯಪಾಲರೂ ಇನ್ನೂ ಅಂಗೀಕರಿಸಬೇಕಿದೆ.

ಕಳೆದ ಲೋಕಸಭಾ ಚುನಾವಣೆ ವೇಳೆ ಊರ್ಮಿಳಾ ಮಾತೋಂಡ್ಕರ್ ಅವರು ಮುಂಬೈ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದ್ರೆ, ಬಿಜೆಪಿ ಅಭ್ಯರ್ಥಿ ಗೋಪಾಲ್ ಶೆಟ್ಟಿ ಎದುರು ಸೋಲು ಕಂಡಿದ್ದರು.

ಸೆಪ್ಟೆಂಬರ್ 10, 2019ರಂದು ಊರ್ಮಿಳಾ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದರು. ಮುಂಬೈ ನಗರ ಕಾಂಗ್ರೆಸ್‌ನಲ್ಲಿ ಗೊಂದಲ ಏರ್ಪಟ್ಟಿರುವ ಕಾರಣ, ಈ ನಿಲುವು ತಳೆದಿರೋದಾಗಿ ಅವರು ಹೇಳಿದ್ದರು. ಸಂಜಯ್ ನಿರುಪಮ್ ಹಾಗೂ ಮಿಲಿಂದ್ ದಿಯೋರಾ ನಡುವಣ ಗುದ್ದಾಟ ಇದಕ್ಕೆಲ್ಲಾ ಕಾರಣವಾಗಿತ್ತು.

Vishwa News 24

Recent Posts

ಶೂಟಿಂಗ್‌ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು – vishwanews24

ಶೂಟಿಂಗ್‌ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು ಮುಂಬಯಿ: ಬಂಗಾಳಿ ಖ್ಯಾತ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ(43)…

4 minutes ago

ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ – vishwanews24

ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ…

12 minutes ago

ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ- vishwanews24

ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ ಮಂಗಳೂರು: ದಕ್ಷಿಣ ಕನ್ನಡ…

17 minutes ago

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 days ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago