Featured

ಕಾಂಗ್ರೆಸ್‌ಗೆ ಮತ್ತೊಂದು ಶಾಕ್‌ : ಕಾಂಗ್ರೆಸ್ ಹಿರಿಯ ನಾಯಕ ಎ.ಬಿ.ಮಾಲಕರಡ್ಡಿ ಬಿಜೆಪಿ ಸೇರ್ಪಡೆ – Vishwanews24

ನಗರದಲ್ಲಿ ಖಾಸಗಿ ಹೋಟೆಲ್‍ನಲ್ಲಿ ಬಿಜೆಪಿ ಮಾಧ್ಯಮ ಕೇಂದ್ರ ಉದ್ಘಾಟನೆ ಮಾಡಲಾಯಿತು. ಈ ವೇಳೆ ಡಾ.ಎ.ಬಿ.ಮಾಲಕರಡ್ಡಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು. ಬಿ.ಎಸ್.ಯಡಿಯೂರಪ್ಪ, ಮಾಲಕರಡ್ಡಿ ಅವರಿಗೆ ಬಿಜೆಪಿ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಬಳಿಕ ಮಾತನಾಡಿದ ಎ.ಬಿ.ಮಾಲಕರಡ್ಡಿ ಅವರು, ಬಿ.ಎಸ್.ಯಡಿಯೂರಪ್ಪ ಅವರ ಜೊತೆಗೆ ಕೆಲಸ ಮಾಡುವುದು ಹೆಮ್ಮೆಯ ವಿಷಯ. ಅವರಿಗೆ ರಾಜಕಾರಣ ಫ್ಯಾಷನೇಟ್ (ಆಕರ್ಷಕವಾಗಿದೆ). ಆದರೆ ನಾನು ಕಾಂಗ್ರೆಸ್ಸನ್ನು ಟೀಕೆ ಮಾಡುವುದಿಲ್ಲ. ಇಲ್ಲಿ ನಾನು ಯಾವುದೇ ನಕಾರಾತ್ಮಕ ವಿಷಯಗಳ ಬಗ್ಗೆ ಹೇಳುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಉತ್ತಮ ಕಾರ್ಯಗಳನ್ನು ಕೆಪಿಸಿಸಿ ಸಭೆಯಲ್ಲೇ ಪ್ರಶಂಸಿದ್ದೇನೆ. ಈಗಲೂ ಅದನ್ನೇ ಹೇಳುತ್ತೇನೆ ಎಂದರು.

ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಅತ್ಯಂತ ಹಿರಿಯ ನಾಯಕರು. ಆರು ಬಾರಿ ಗೆದ್ದ ನಮ್ಮಂತಹ ಹಿರಿಯರನ್ನು ಕಡೆಗಣಿಸಿ ತಮ್ಮ ಮಗ ಪ್ರಿಯಾಂಕ್ ಖರ್ಗೆ ಅವರನ್ನು ಮಂತ್ರಿ ಮಾಡಿದ್ದಾರೆ. ಅಂತಹ ಚಿಕ್ಕ ಹುಡುಗನನ್ನು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವನನ್ನಾಗಿ ಮಾಡಿ, ನಮ್ಮಂತಹವರು ಆತನ ಕೈಕೆಳಗೆ ಕೆಲಸ ಮಾಡುವಂತೆ ಮಾಡಿದರು. ಕಾಂಗ್ರೆಸ್‍ನಲ್ಲಿ ಶಾಸಕರು, ಜನಪ್ರತಿನಿಧಿಗಳು ಲೆಕ್ಕಕ್ಕೆ ಇಲ್ಲದಂತಾಗಿದ್ದು, ಸ್ವಾರ್ಥ ಹೆಚ್ಚಾಗಿದೆ ಎಂದು ಅಸಮಾಧಾನ ಹೊರಹಾಕಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

9 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

9 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

10 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

10 hours ago