Featured

ಕಾಂಗ್ರೆಸ್‌ಗೆ ಮತ್ತೊಂದು ಶಾಕ್‌ : ಕಾಂಗ್ರೆಸ್ ಹಿರಿಯ ನಾಯಕ ಎ.ಬಿ.ಮಾಲಕರಡ್ಡಿ ಬಿಜೆಪಿ ಸೇರ್ಪಡೆ – Vishwanews24

ನಗರದಲ್ಲಿ ಖಾಸಗಿ ಹೋಟೆಲ್‍ನಲ್ಲಿ ಬಿಜೆಪಿ ಮಾಧ್ಯಮ ಕೇಂದ್ರ ಉದ್ಘಾಟನೆ ಮಾಡಲಾಯಿತು. ಈ ವೇಳೆ ಡಾ.ಎ.ಬಿ.ಮಾಲಕರಡ್ಡಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು. ಬಿ.ಎಸ್.ಯಡಿಯೂರಪ್ಪ, ಮಾಲಕರಡ್ಡಿ ಅವರಿಗೆ ಬಿಜೆಪಿ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಬಳಿಕ ಮಾತನಾಡಿದ ಎ.ಬಿ.ಮಾಲಕರಡ್ಡಿ ಅವರು, ಬಿ.ಎಸ್.ಯಡಿಯೂರಪ್ಪ ಅವರ ಜೊತೆಗೆ ಕೆಲಸ ಮಾಡುವುದು ಹೆಮ್ಮೆಯ ವಿಷಯ. ಅವರಿಗೆ ರಾಜಕಾರಣ ಫ್ಯಾಷನೇಟ್ (ಆಕರ್ಷಕವಾಗಿದೆ). ಆದರೆ ನಾನು ಕಾಂಗ್ರೆಸ್ಸನ್ನು ಟೀಕೆ ಮಾಡುವುದಿಲ್ಲ. ಇಲ್ಲಿ ನಾನು ಯಾವುದೇ ನಕಾರಾತ್ಮಕ ವಿಷಯಗಳ ಬಗ್ಗೆ ಹೇಳುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಉತ್ತಮ ಕಾರ್ಯಗಳನ್ನು ಕೆಪಿಸಿಸಿ ಸಭೆಯಲ್ಲೇ ಪ್ರಶಂಸಿದ್ದೇನೆ. ಈಗಲೂ ಅದನ್ನೇ ಹೇಳುತ್ತೇನೆ ಎಂದರು.

ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಅತ್ಯಂತ ಹಿರಿಯ ನಾಯಕರು. ಆರು ಬಾರಿ ಗೆದ್ದ ನಮ್ಮಂತಹ ಹಿರಿಯರನ್ನು ಕಡೆಗಣಿಸಿ ತಮ್ಮ ಮಗ ಪ್ರಿಯಾಂಕ್ ಖರ್ಗೆ ಅವರನ್ನು ಮಂತ್ರಿ ಮಾಡಿದ್ದಾರೆ. ಅಂತಹ ಚಿಕ್ಕ ಹುಡುಗನನ್ನು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವನನ್ನಾಗಿ ಮಾಡಿ, ನಮ್ಮಂತಹವರು ಆತನ ಕೈಕೆಳಗೆ ಕೆಲಸ ಮಾಡುವಂತೆ ಮಾಡಿದರು. ಕಾಂಗ್ರೆಸ್‍ನಲ್ಲಿ ಶಾಸಕರು, ಜನಪ್ರತಿನಿಧಿಗಳು ಲೆಕ್ಕಕ್ಕೆ ಇಲ್ಲದಂತಾಗಿದ್ದು, ಸ್ವಾರ್ಥ ಹೆಚ್ಚಾಗಿದೆ ಎಂದು ಅಸಮಾಧಾನ ಹೊರಹಾಕಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago