ಚನ್ನಪಟ್ಟಣ, : ರಾಜ್ಯದಲ್ಲಿ ಪ್ರಾದೇಶಿಕ ಪಕ್ಷವಾಗಿ ಗುರುತಿಸಿಕೊಂಡಿದ್ದ ಜೆ.ಡಿ.ಎಸ್.ಗೆ ಮೈತ್ರಿ ಪಕ್ಷವಾದ ಕಾಂಗ್ರೆಸ್ ಪಕ್ಷವೇ ಭಾರಿ ಪೆಟ್ಟು ನೀಡಲಿದೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಭವಿಷ್ಯ ನುಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ನೆಪ ಮಾತ್ರಕ್ಕೆ ಕಾಂಗ್ರೆಸ್ ಹಾಗೂ ಜೆ.ಡಿ.ಎಸ್.ಮೈತ್ರಿ ಅಭ್ಯರ್ಥಿಯಾಗಿದ್ದು, ನಿಜವಾದ ಸತ್ಯ ಎಂದರೆ, ಈ ಚುನಾವಣೆಯಲ್ಲಿ ಜೆ.ಡಿ.ಎಸ್.ಚಿಹ್ನೆಯೇ ಮಾಯವಾಗಿದ್ದು, ಕಾಂಗ್ರೆಸ್ ಪರೋಕ್ಷವಾಗಿ ಜೆ.ಡಿ.ಎಸ್.ನಿರ್ನಾಮಕ್ಕೆ ಮುಂದಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ಜೆ.ಡಿ.ಎಸ್.ತನ್ನ ಅಸ್ತಿತ್ವವನ್ನು ಕಳೆದುಕೊಳ್ಳಲಿದೆ ಎಂದರು.
ಒಟ್ಟಾರೆ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷವಾಗಿರುವ ಜೆ.ಡಿ.ಎಸ್.ತನ್ನ ನೆಲೆಯನ್ನು ಕಳೆದುಕೊಳ್ಳುವ ಕಾಲ ದೂರವಿಲ್ಲಾ, ಜೆ.ಡಿ.ಎಸ್.ಪಕ್ಷವನ್ನು ನಿರ್ನಾಮ ಮಾಡಲು ದೂರದ ದೇಶದಿಂದ ಶತ್ರುಗಳು ಬರಬೇಕಾಗಿಲ್ಲ ಅವರ ಜೊತೆ ಇರುವ ಕಾಂಗ್ರೆಸ್ ಪಕ್ಷವೇ ಸಾಕು ಎಂದು ತಿಳಿಸಿದರು.
ಸಂಸದ ಡಿ.ಕೆ.ಸುರೇಶ್ ಒಂದು ದಿನ ಸಂಸತ್ನಲ್ಲಿ ರಾಜ್ಯದ ಜನರ ನೋವು ನಲಿವುಗಳ ಬಗ್ಗೆ ಮಾತನಾಡಿದ್ದಾರೆಯೇ ? ಇಲ್ಲಾ ಏಕೆಂದರೆ ಅವರಿಗೆ ಕನ್ನಡ ಬಿಟ್ಟರೆ ಹಿಂದಿ, ಇಂಗ್ಲೀಷ್ ಬಂದರೆ ತಾನೇ ಎಂದು ವ್ಯಂಗ್ಯವಾಡಿದರು.
ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕು ಬಿ.ಜೆ.ಪಿ.ಅಧ್ಯಕ್ಷ ಎಂ.ಎನ್.ಆನಂದಸ್ವಾಮಿ, ನಗರ ಘಟಕದ ಅಧ್ಯಕ್ಷ ವಿಷಕಂಠು, ಬಿ.ಜೆ.ಪಿ.ಮುಖಂಡರಾದ ರಾಂಪುರ ಮಲವೇಗೌಡ, ಸಿ.ಪಿ.ನಾಗೇಶ್, ರಾಮಚಂದ್ರ, ನಗರಸಭಾ ಸದಸ್ಯ ರಾಮಣ್ಣ, ಚಕ್ಕರೆ ರಾಮು ಹಾಗೂ ಹಲವಾರು ಮುಖಂಡರು ಹಾಜರಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…