ಚನ್ನಪಟ್ಟಣ, : ರಾಜ್ಯದಲ್ಲಿ ಪ್ರಾದೇಶಿಕ ಪಕ್ಷವಾಗಿ ಗುರುತಿಸಿಕೊಂಡಿದ್ದ ಜೆ.ಡಿ.ಎಸ್.ಗೆ ಮೈತ್ರಿ ಪಕ್ಷವಾದ ಕಾಂಗ್ರೆಸ್ ಪಕ್ಷವೇ ಭಾರಿ ಪೆಟ್ಟು ನೀಡಲಿದೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಭವಿಷ್ಯ ನುಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ನೆಪ ಮಾತ್ರಕ್ಕೆ ಕಾಂಗ್ರೆಸ್ ಹಾಗೂ ಜೆ.ಡಿ.ಎಸ್.ಮೈತ್ರಿ ಅಭ್ಯರ್ಥಿಯಾಗಿದ್ದು, ನಿಜವಾದ ಸತ್ಯ ಎಂದರೆ, ಈ ಚುನಾವಣೆಯಲ್ಲಿ ಜೆ.ಡಿ.ಎಸ್.ಚಿಹ್ನೆಯೇ ಮಾಯವಾಗಿದ್ದು, ಕಾಂಗ್ರೆಸ್ ಪರೋಕ್ಷವಾಗಿ ಜೆ.ಡಿ.ಎಸ್.ನಿರ್ನಾಮಕ್ಕೆ ಮುಂದಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ಜೆ.ಡಿ.ಎಸ್.ತನ್ನ ಅಸ್ತಿತ್ವವನ್ನು ಕಳೆದುಕೊಳ್ಳಲಿದೆ ಎಂದರು.
ಒಟ್ಟಾರೆ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷವಾಗಿರುವ ಜೆ.ಡಿ.ಎಸ್.ತನ್ನ ನೆಲೆಯನ್ನು ಕಳೆದುಕೊಳ್ಳುವ ಕಾಲ ದೂರವಿಲ್ಲಾ, ಜೆ.ಡಿ.ಎಸ್.ಪಕ್ಷವನ್ನು ನಿರ್ನಾಮ ಮಾಡಲು ದೂರದ ದೇಶದಿಂದ ಶತ್ರುಗಳು ಬರಬೇಕಾಗಿಲ್ಲ ಅವರ ಜೊತೆ ಇರುವ ಕಾಂಗ್ರೆಸ್ ಪಕ್ಷವೇ ಸಾಕು ಎಂದು ತಿಳಿಸಿದರು.
ಸಂಸದ ಡಿ.ಕೆ.ಸುರೇಶ್ ಒಂದು ದಿನ ಸಂಸತ್ನಲ್ಲಿ ರಾಜ್ಯದ ಜನರ ನೋವು ನಲಿವುಗಳ ಬಗ್ಗೆ ಮಾತನಾಡಿದ್ದಾರೆಯೇ ? ಇಲ್ಲಾ ಏಕೆಂದರೆ ಅವರಿಗೆ ಕನ್ನಡ ಬಿಟ್ಟರೆ ಹಿಂದಿ, ಇಂಗ್ಲೀಷ್ ಬಂದರೆ ತಾನೇ ಎಂದು ವ್ಯಂಗ್ಯವಾಡಿದರು.
ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕು ಬಿ.ಜೆ.ಪಿ.ಅಧ್ಯಕ್ಷ ಎಂ.ಎನ್.ಆನಂದಸ್ವಾಮಿ, ನಗರ ಘಟಕದ ಅಧ್ಯಕ್ಷ ವಿಷಕಂಠು, ಬಿ.ಜೆ.ಪಿ.ಮುಖಂಡರಾದ ರಾಂಪುರ ಮಲವೇಗೌಡ, ಸಿ.ಪಿ.ನಾಗೇಶ್, ರಾಮಚಂದ್ರ, ನಗರಸಭಾ ಸದಸ್ಯ ರಾಮಣ್ಣ, ಚಕ್ಕರೆ ರಾಮು ಹಾಗೂ ಹಲವಾರು ಮುಖಂಡರು ಹಾಜರಿದ್ದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…