ಚನ್ನಪಟ್ಟಣ, : ರಾಜ್ಯದಲ್ಲಿ ಪ್ರಾದೇಶಿಕ ಪಕ್ಷವಾಗಿ ಗುರುತಿಸಿಕೊಂಡಿದ್ದ ಜೆ.ಡಿ.ಎಸ್.ಗೆ ಮೈತ್ರಿ ಪಕ್ಷವಾದ ಕಾಂಗ್ರೆಸ್ ಪಕ್ಷವೇ ಭಾರಿ ಪೆಟ್ಟು ನೀಡಲಿದೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಭವಿಷ್ಯ ನುಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ನೆಪ ಮಾತ್ರಕ್ಕೆ ಕಾಂಗ್ರೆಸ್ ಹಾಗೂ ಜೆ.ಡಿ.ಎಸ್.ಮೈತ್ರಿ ಅಭ್ಯರ್ಥಿಯಾಗಿದ್ದು, ನಿಜವಾದ ಸತ್ಯ ಎಂದರೆ, ಈ ಚುನಾವಣೆಯಲ್ಲಿ ಜೆ.ಡಿ.ಎಸ್.ಚಿಹ್ನೆಯೇ ಮಾಯವಾಗಿದ್ದು, ಕಾಂಗ್ರೆಸ್ ಪರೋಕ್ಷವಾಗಿ ಜೆ.ಡಿ.ಎಸ್.ನಿರ್ನಾಮಕ್ಕೆ ಮುಂದಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ಜೆ.ಡಿ.ಎಸ್.ತನ್ನ ಅಸ್ತಿತ್ವವನ್ನು ಕಳೆದುಕೊಳ್ಳಲಿದೆ ಎಂದರು.
ಒಟ್ಟಾರೆ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷವಾಗಿರುವ ಜೆ.ಡಿ.ಎಸ್.ತನ್ನ ನೆಲೆಯನ್ನು ಕಳೆದುಕೊಳ್ಳುವ ಕಾಲ ದೂರವಿಲ್ಲಾ, ಜೆ.ಡಿ.ಎಸ್.ಪಕ್ಷವನ್ನು ನಿರ್ನಾಮ ಮಾಡಲು ದೂರದ ದೇಶದಿಂದ ಶತ್ರುಗಳು ಬರಬೇಕಾಗಿಲ್ಲ ಅವರ ಜೊತೆ ಇರುವ ಕಾಂಗ್ರೆಸ್ ಪಕ್ಷವೇ ಸಾಕು ಎಂದು ತಿಳಿಸಿದರು.
ಸಂಸದ ಡಿ.ಕೆ.ಸುರೇಶ್ ಒಂದು ದಿನ ಸಂಸತ್ನಲ್ಲಿ ರಾಜ್ಯದ ಜನರ ನೋವು ನಲಿವುಗಳ ಬಗ್ಗೆ ಮಾತನಾಡಿದ್ದಾರೆಯೇ ? ಇಲ್ಲಾ ಏಕೆಂದರೆ ಅವರಿಗೆ ಕನ್ನಡ ಬಿಟ್ಟರೆ ಹಿಂದಿ, ಇಂಗ್ಲೀಷ್ ಬಂದರೆ ತಾನೇ ಎಂದು ವ್ಯಂಗ್ಯವಾಡಿದರು.
ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕು ಬಿ.ಜೆ.ಪಿ.ಅಧ್ಯಕ್ಷ ಎಂ.ಎನ್.ಆನಂದಸ್ವಾಮಿ, ನಗರ ಘಟಕದ ಅಧ್ಯಕ್ಷ ವಿಷಕಂಠು, ಬಿ.ಜೆ.ಪಿ.ಮುಖಂಡರಾದ ರಾಂಪುರ ಮಲವೇಗೌಡ, ಸಿ.ಪಿ.ನಾಗೇಶ್, ರಾಮಚಂದ್ರ, ನಗರಸಭಾ ಸದಸ್ಯ ರಾಮಣ್ಣ, ಚಕ್ಕರೆ ರಾಮು ಹಾಗೂ ಹಲವಾರು ಮುಖಂಡರು ಹಾಜರಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…