ಹೊಸದಿಲ್ಲಿ : ಸೋನಿಯಾ ಗಾಂಧಿ ಅವರಿಂದು ಬುಧವಾರ ಕಾಂಗ್ರೆಸ್ ಸಂಸದೀಯ ಪಕ್ಷದ ಮಹಾ ಸಭೆಯಲ್ಲಿ ಮಾತನಾಡುತ್ತಾ, ‘ಆಳುವ ಮೋದಿ ಸರಕಾರದ ಆಡಳಿತ ತತ್ವವೇನೆಂದರೆ ಬಲಿಷ್ಠನೆಂದು ತೋರ್ಪಡಿಸಿಕೊಳ್ಳುವುದು, ಮಾತಿನ ಅರಮನೆ ಕಟ್ಟುವುದು ಮತ್ತು ಎದುರಾಳಿಗಳಿಗೆ ಬೆದರಿಕೆ ಒಡ್ಡುವುದೇ ಆಗಿದೆ’ ಎಂದು ಟೀಕಿಸಿದರು.
ಕಾಂಗ್ರೆಸ್ ಪಕ್ಷ ತನ್ನ ರಾಜಕೀಯ ವಿರೋಧಿಗಳನ್ನು ಪೂರ್ಣ ಶಕ್ತಿಯೊಂದಿಗೆ ಹಣಿಯುವ ಸಾಮರ್ಥ್ಯವನ್ನು ಹೊಂದಿದೆ ಎಂದು ಸೋನಿಯಾ ಹೇಳಿದರು.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪಕ್ಷಕ್ಕೆ ಹೊಸ ಶಕ್ತಿ, ಹುಮ್ಮಸ್ಸನ್ನು ತುಂಬಿದ್ದಾರೆ; ಅನುಭವ ಮತ್ತು ಯುವ ಶಕ್ತಿಯನ್ನು ಒಗ್ಗೂಡಿಸಿ ಪಕ್ಷವನ್ನು ಪುನರ್ ಸಂಘಟಿಸಿದ್ದಾರೆ ಎಂದು ಹೇಳಿದ ಸೋನಿಯಾ, ರಾಹುಲ್ ಅವರ ಸಂಘಟನಾ ಚಾತುರ್ಯವನ್ನು ಪ್ರಶಂಸಿಸಿದರು.
ರಾಜಸ್ಥಾನ, ಛತ್ತೀಸ್ಗಢ ಮತ್ತು ಮಧ್ಯಪ್ರದೇಶದಲ್ಲಿ ನಾವು ಸಾಧಿಸಿರುವ ಗೆಲುವಿನ ಬಲ, ವಿಶ್ವಾಸದೊಂದಿಗೆ ನಾವು ಮುಂಬರುವ ಲೋಕಸಭಾ ಚುನಾವಣೆಯನ್ನು ಎದುರಿಸಲು ಮುಂದಾಗುತ್ತಿದ್ದೇವೆ; ಮೂರು ರಾಜ್ಯಗಳನ್ನು ಜಯಿಸಿರುವ ನಮ್ಮಲ್ಲೀಗ ಹೊಸ ಭರವಸೆ, ಹೊಸ ವಿಶ್ವಾಸ ತುಂಬಿಕೊಂಡಿದೆ ಎಂದು ಹೇಳಿದರು.
ಕಾಂಗ್ರೆಸ್ ಸಂಸದೀಯ ಪಕ್ಷದ ಮಹಾ ಸಭೆಯಲ್ಲಿ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ಸಿಂಗ್, ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ಗುಲಾಂ ನಬೀ ಆಜಾದ್ ಮತ್ತು ಇತರ ಪ್ರಮುಖ ಪಾಲ್ಗೊಂಡಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…