ಹೊಸದಿಲ್ಲಿ : ಸೋನಿಯಾ ಗಾಂಧಿ ಅವರಿಂದು ಬುಧವಾರ ಕಾಂಗ್ರೆಸ್ ಸಂಸದೀಯ ಪಕ್ಷದ ಮಹಾ ಸಭೆಯಲ್ಲಿ ಮಾತನಾಡುತ್ತಾ, ‘ಆಳುವ ಮೋದಿ ಸರಕಾರದ ಆಡಳಿತ ತತ್ವವೇನೆಂದರೆ ಬಲಿಷ್ಠನೆಂದು ತೋರ್ಪಡಿಸಿಕೊಳ್ಳುವುದು, ಮಾತಿನ ಅರಮನೆ ಕಟ್ಟುವುದು ಮತ್ತು ಎದುರಾಳಿಗಳಿಗೆ ಬೆದರಿಕೆ ಒಡ್ಡುವುದೇ ಆಗಿದೆ’ ಎಂದು ಟೀಕಿಸಿದರು.
ಕಾಂಗ್ರೆಸ್ ಪಕ್ಷ ತನ್ನ ರಾಜಕೀಯ ವಿರೋಧಿಗಳನ್ನು ಪೂರ್ಣ ಶಕ್ತಿಯೊಂದಿಗೆ ಹಣಿಯುವ ಸಾಮರ್ಥ್ಯವನ್ನು ಹೊಂದಿದೆ ಎಂದು ಸೋನಿಯಾ ಹೇಳಿದರು.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪಕ್ಷಕ್ಕೆ ಹೊಸ ಶಕ್ತಿ, ಹುಮ್ಮಸ್ಸನ್ನು ತುಂಬಿದ್ದಾರೆ; ಅನುಭವ ಮತ್ತು ಯುವ ಶಕ್ತಿಯನ್ನು ಒಗ್ಗೂಡಿಸಿ ಪಕ್ಷವನ್ನು ಪುನರ್ ಸಂಘಟಿಸಿದ್ದಾರೆ ಎಂದು ಹೇಳಿದ ಸೋನಿಯಾ, ರಾಹುಲ್ ಅವರ ಸಂಘಟನಾ ಚಾತುರ್ಯವನ್ನು ಪ್ರಶಂಸಿಸಿದರು.
ರಾಜಸ್ಥಾನ, ಛತ್ತೀಸ್ಗಢ ಮತ್ತು ಮಧ್ಯಪ್ರದೇಶದಲ್ಲಿ ನಾವು ಸಾಧಿಸಿರುವ ಗೆಲುವಿನ ಬಲ, ವಿಶ್ವಾಸದೊಂದಿಗೆ ನಾವು ಮುಂಬರುವ ಲೋಕಸಭಾ ಚುನಾವಣೆಯನ್ನು ಎದುರಿಸಲು ಮುಂದಾಗುತ್ತಿದ್ದೇವೆ; ಮೂರು ರಾಜ್ಯಗಳನ್ನು ಜಯಿಸಿರುವ ನಮ್ಮಲ್ಲೀಗ ಹೊಸ ಭರವಸೆ, ಹೊಸ ವಿಶ್ವಾಸ ತುಂಬಿಕೊಂಡಿದೆ ಎಂದು ಹೇಳಿದರು.
ಕಾಂಗ್ರೆಸ್ ಸಂಸದೀಯ ಪಕ್ಷದ ಮಹಾ ಸಭೆಯಲ್ಲಿ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ಸಿಂಗ್, ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ಗುಲಾಂ ನಬೀ ಆಜಾದ್ ಮತ್ತು ಇತರ ಪ್ರಮುಖ ಪಾಲ್ಗೊಂಡಿದ್ದಾರೆ.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…