Featured

ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಪಕ್ಷಕ್ಕೆ ಹೊಸ ಶಕ್ತಿ, ಹುಮ್ಮಸ್ಸನ್ನು ತುಂಬಿದ್ದಾರೆ : ಸೋನಿಯಾ ಗಾಂಧಿ – Vishwanews24

ಹೊಸದಿಲ್ಲಿ : ಸೋನಿಯಾ ಗಾಂಧಿ ಅವರಿಂದು ಬುಧವಾರ ಕಾಂಗ್ರೆಸ್‌ ಸಂಸದೀಯ ಪಕ್ಷದ ಮಹಾ ಸಭೆಯಲ್ಲಿ ಮಾತನಾಡುತ್ತಾ, ‘ಆಳುವ ಮೋದಿ ಸರಕಾರದ ಆಡಳಿತ ತತ್ವವೇನೆಂದರೆ ಬಲಿಷ್ಠನೆಂದು ತೋರ್ಪಡಿಸಿಕೊಳ್ಳುವುದು, ಮಾತಿನ ಅರಮನೆ ಕಟ್ಟುವುದು ಮತ್ತು ಎದುರಾಳಿಗಳಿಗೆ ಬೆದರಿಕೆ ಒಡ್ಡುವುದೇ ಆಗಿದೆ’ ಎಂದು ಟೀಕಿಸಿದರು.

ಕಾಂಗ್ರೆಸ್‌ ಪಕ್ಷ ತನ್ನ ರಾಜಕೀಯ ವಿರೋಧಿಗಳನ್ನು ಪೂರ್ಣ ಶಕ್ತಿಯೊಂದಿಗೆ ಹಣಿಯುವ ಸಾಮರ್ಥ್ಯವನ್ನು ಹೊಂದಿದೆ ಎಂದು ಸೋನಿಯಾ ಹೇಳಿದರು.

ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಪಕ್ಷಕ್ಕೆ ಹೊಸ ಶಕ್ತಿ, ಹುಮ್ಮಸ್ಸನ್ನು ತುಂಬಿದ್ದಾರೆ; ಅನುಭವ ಮತ್ತು ಯುವ ಶಕ್ತಿಯನ್ನು ಒಗ್ಗೂಡಿಸಿ ಪಕ್ಷವನ್ನು ಪುನರ್‌ ಸಂಘಟಿಸಿದ್ದಾರೆ ಎಂದು ಹೇಳಿದ ಸೋನಿಯಾ, ರಾಹುಲ್‌ ಅವರ ಸಂಘಟನಾ ಚಾತುರ್ಯವನ್ನು ಪ್ರಶಂಸಿಸಿದರು.

ರಾಜಸ್ಥಾನ, ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶದಲ್ಲಿ ನಾವು ಸಾಧಿಸಿರುವ ಗೆಲುವಿನ ಬಲ, ವಿಶ್ವಾಸದೊಂದಿಗೆ ನಾವು ಮುಂಬರುವ ಲೋಕಸಭಾ ಚುನಾವಣೆಯನ್ನು ಎದುರಿಸಲು ಮುಂದಾಗುತ್ತಿದ್ದೇವೆ; ಮೂರು ರಾಜ್ಯಗಳನ್ನು ಜಯಿಸಿರುವ ನಮ್ಮಲ್ಲೀಗ ಹೊಸ ಭರವಸೆ, ಹೊಸ ವಿಶ್ವಾಸ ತುಂಬಿಕೊಂಡಿದೆ ಎಂದು ಹೇಳಿದರು.

ಕಾಂಗ್ರೆಸ್‌ ಸಂಸದೀಯ ಪಕ್ಷದ ಮಹಾ ಸಭೆಯಲ್ಲಿ ರಾಹುಲ್‌ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್‌ಸಿಂಗ್‌, ಲೋಕಸಭೆಯಲ್ಲಿನ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ಗುಲಾಂ ನಬೀ ಆಜಾದ್‌ ಮತ್ತು ಇತರ ಪ್ರಮುಖ ಪಾಲ್ಗೊಂಡಿದ್ದಾರೆ.

 

Vishwa News 24

Recent Posts

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…

2 days ago

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ -vishwanews24

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…

2 days ago

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

2 days ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

2 days ago

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ -vishwanews24

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…

2 days ago

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ -Vishwanews24

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…

2 days ago