Featured

ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ರಾಷ್ಟ್ರಾಧ್ಯಕ್ಷ ಹುದ್ದೆ ತೊರೆಯುವುದು ಸರಿಯಲ್ಲ : ವೀರಪ್ಪ ಮೊಯ್ಲಿ -Vishwanews24

ಹೈದರಾಬಾದ್‌: ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ಬಳಿಕ ವಿವಿಧ ರಾಜ್ಯಗಳ ಕಾಂಗ್ರೆಸ ಘಟಕಗಳಲ್ಲಿ ಬಂಡಾಯದ ಬೆಂಕಿ ಭುಗಿಲೆದ್ದಿರುವಾಗ, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ರಾಷ್ಟ್ರಾಧ್ಯಕ್ಷ ಹುದ್ದೆ ತೊರೆಯುವುದು ಸರಿಯಲ್ಲ ಎಂದು ಪಕ್ಷದ ಹಿರಿಯ ನಾಯಕ ಎಂ.ವೀರಪ್ಪ ಮೊಯ್ಲಿ ಸಲಹೆ ನೀಡಿದ್ದಾರೆ. ಅಲ್ಲದೆ ಒಂದು ವೇಳೆ ರಾಜೀನಾಮೆ ನೀಡುವುದೇ ಆದಲ್ಲಿಪರ್ಯಾಯ ವ್ಯವಸ್ಥೆ ಮಾಡುವವರೆಗೂ ರಾಹುಲ್‌ ಹುದ್ದೆಯಲ್ಲಿ ಮುಂದುವರೆಯಬೇಕು ಎಂದು ಒತ್ತಾಯಿಸಿದ್ದಾರೆ.

ಪಂಜಾಬ್‌, ಮಹಾರಾಷ್ಟ್ರ, ರಾಜಸ್ಥಾನ, ತೆಲಂಗಾಣದ ಕಾಂಗ್ರೆಸ್‌ ಘಟಕದಲ್ಲಿನ ಬಂಡಾಯದ ಹಿನ್ನೆಲೆಯಲ್ಲಿ ಪಿಟಿಐ ಸುದ್ದಿಸಂಸ್ಥೆ ಜೊತೆ ಮಾತನಾಡಿರುವ ವೀರಪ್ಪ ಮೊಯ್ಲಿ, ‘ನಾಯಕತ್ವ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳದೇ ಇದ್ದಾಗ, ಇಂಥ ಸಂಗತಿಗಳು ನಡೆಯುತ್ತವೆ. ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಆದ ಹಿನ್ನಡೆಯಿಂದ ಕಾಂಗ್ರೆಸ್‌ ನಿರಾಶೆಗೊಳ್ಳಬಾರದು.

ಮುಂದಿನ ದಿನಗಳಲ್ಲಿ ಖಂಡಿತಾ ಪಕ್ಷ ಪುಟಿದೇಳಲಿದೆ. ಇಂಥಾ ಒಂದು ಆಶಾವಾದ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನಿಂದ ಹಿಡಿದು ಮೇಲಿನ ಹಂತದ ನಾಯಕರಲ್ಲಿ ಇರಬೇಕು. ಪಂಜಾಬ್‌, ರಾಜಸ್ಥಾನದಲ್ಲಿನ ಕಾಂಗ್ರೆಸ್‌ ಘಟಕಗಳಲ್ಲಿ ಬಂಡಾಯದ ಬೆಂಕಿ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಮಧ್ಯಪ್ರವೇಶಿಸಬೇಕು. ಭಿನ್ನಮತ ಶಮನಗೊಳಿಸಬೇಕು. ತಕ್ಷಣವೇ ರಾಜೀನಾಮೆ ಹಿಂಪಡೆಯಬೇಕು ಎಂದು ಸಲಹೆ ಮಾಡಿದ್ದಾರೆ.

ರಾಜೀನಾಮೆ ನೀಡಲು ರಾಹುಲ್‌ ಅವರಿಗೆ ಇದು ಸೂಕ್ತ ಸಮಯವಲ್ಲ. ಪರಿಸ್ಥಿತಿಯನ್ನು ನಿಭಾಯಿಸಲು ಪರ್ಯಾಯ ವ್ಯವಸ್ಥೆ ಮಾಡುವವರೆಗೂ ರಾಹುಲ್‌ ಅವರು ಹುದ್ದೆ ತೊರೆಯಬಾರದು. ರಾಹುಲ್‌ ಅವರು ತಕ್ಷಣವೇ ರಾಜೀನಾಮೆ ಹಿಂಪಡೆಯಬೇಕು. ಅಧಿಕಾರ ವಹಿಸಿಕೊಂಡು, ಶಿಸ್ತು ಜಾರಿಗೊಳಿಸಿ, ಸಮಯ ವ್ಯರ್ಥ ಮಾಡದೇ ಪಕ್ಷ ಪುನಶ್ಚೇತನಗೊಳಿಸಬೇಕು. ವಿಶ್ವಾಸ, ಕೆಚ್ಚು ತುಂಬಬೇಕು ಎಂದು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago