ಹೊಸದಿಲ್ಲಿ : ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಒಬಿಸಿ ಅಥವಾ ಎಸ್ಸಿ/ಎಸ್ಟಿ ನಾಯಕರನ್ನು ನೇಮಿಸುವಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪಕ್ಷದ ಹಿರಿಯ ನಾಯಕರನ್ನು ಕೇಳಿಕೊಂಡಿದ್ದಾರೆ.
ಈ ನಡುವೆ ಪಕ್ಷದ ಹಿರಿಯ ನಾಯಕರು ರಾಹುಲ್ ಗಾಂಧಿಗೆ ಪಕ್ಷದ ಅಧ್ಯಕ್ಷ ಸ್ಥಾನವನ್ನು ಬಿಡದಂತೆ ಒತ್ತಾಯಿಸುವುದನ್ನು ಮುಂದುವರಿಸಿದ್ದಾರೆ; ಆದರೂ ರಾಹುಲ್ ಯಾವುದೇ ಒತ್ತಡಕ್ಕೆ ತಾನು ಮಣಿಯುವುದಿಲ್ಲ; ಅಧ್ಯಕ್ಷ ಪದಕ್ಕೆ ತನ್ನ ರಾಜೀನಾಮೆ ನಿಲುವು ಅಚಲ ಎಂದು ಸ್ಪಷ್ಟಪಡಿಸಿದ್ದಾರೆ.
ಈಗಷ್ಟೇ ಮುಗಿದಿರುವ 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 52 ಸ್ಥಾನಗಳನ್ನು ಗೆದ್ದು ಅತ್ಯಂತ ದಯನೀಯ ನಿರ್ವಹಣೆಯನ್ನು ತೋರಿದ್ದು ಇದರ ಪೂರ್ತಿ ಹೊಣೆಯನ್ನು ತಾನೇ ವಹಿಸಿಕೊಂಡು ಪಕ್ಷದ ಅಧ್ಯಕ್ಷ ಪದಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ರಾಹುಲ್ ಹೇಳಿದ್ದಾರೆ.
ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳ ನಾಯಕರಾದ ಲಾಲು ಪ್ರಸಾದ್ ಯಾದವ್, ಎಂ ಕೆ ಸ್ಟಾಲಿನ್, ಎಚ್ ಡಿ ಕುಮಾರಸ್ವಾಮಿ, ಶೀಲಾ ದೀಕ್ಷಿತ್ ಮುಂತಾಗಿ ಅನೇಕರು ರಾಹುಲ್ ಗಾಂಧಿಗೆ ಪಕ್ಷಾಧ್ಯಕ್ಷ ಹುದ್ದೆಯಲ್ಲಿ ಮುಂದುವರಿಯವಂತೆ ಕೋರಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…