‘ಬಿ.ಎಸ್. ಯಡಿಯೂರಪ್ಪ ಅವರ ರಾಜೀನಾಮೆಯಿಂದ ನಾವೇನೂ ಕಂಗೆಟ್ಟಿಲ್ಲ; ಆದರೆ, ಕಾಂಗ್ರೆಸ್–ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಇರುವವರನ್ನು ಮಲಗಲು ಬಿಡುವುದಿಲ್ಲ’ ಎಂದು ಶಾಸಕ ಬಿ. ಶ್ರೀರಾಮುಲು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಹುಮತ ಸಾಬೀತುಪಡಿಸಲು ಬಿಜೆಪಿಗೆ ಅವಕಾಶ ಮಾಡಿಕೊಡದೇ ಗೆದ್ದಿದ್ದಾಗಿ ಅವರು ಬೀಗುತ್ತಿದ್ದಾರೆ. ಆ ಎರಡೂ ಪಕ್ಷಗಳು ಹಿಂದಿನ ಚುನಾವಣೆಗಿಂತ ಕಡಿಮೆ ಸ್ಥಾನಗಳನ್ನು ಪಡೆದಿದ್ದು, ಜನ ಅವರನ್ನು ತಿರಸ್ಕರಿಸಿದ್ದಾರೆ ಎಂಬುದನ್ನು ಮರೆಯಬಾರದು’ಎಂದರು.
‘ಭ್ರಷ್ಟಾಚಾರ ನಡೆಸಲು ಕಾಂಗ್ರೆಸ್ನವರು ಲೋಕಾಯುಕ್ತ ಸಂಸ್ಥೆಯ ಹಲ್ಲು ಮುರಿದಿದ್ದಾರೆ. ಮೈತ್ರಿ ಸರ್ಕಾರದ ಹೆಸರಿನಲ್ಲಿ ಈಗಲೂ ಭ್ರಷ್ಟಾಚಾರ ಮುಂದುವರಿಸಬಹುದು ಎಂದು ಭಾವಿಸಿದ್ದಾರೆ. ಆದರೆ, 104 ಸದಸ್ಯ ಬಲದ ಬಿಜೆಪಿ ಪ್ರಬಲ ಪ್ರತಿಪಕ್ಷವಾಗಿ ವಿಧಾನಸಭೆಯಲ್ಲಿ ಕೆಲಸ ನಿರ್ವಹಿಸಲಿದೆ. ಅವರ ಪ್ರತಿಯೊಂದು ಅಕ್ರಮವನ್ನೂ ಬಯಲಿಗೆಳೆಯಲಿದೆ. ದಿನದ 24 ತಾಸೂ ಅವರ ಕೆಲಸದ ಮೇಲೆ ನಿಗಾ ಇಡುತ್ತೇವೆ’ ಎಂದರು.
‘ಬಿಜೆಪಿ ಅಧಿಕಾರಕ್ಕೆ ಬಂದರೆ ಜೈಲಿಗೆ ಹೋಗಬೇಕಾಗುತ್ತದೆ ಎಂಬ ಭಯದಿಂದ ಕಾಂಗ್ರೆಸ್– ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿವೆ. ಈ ಮೈತ್ರಿ ಸರ್ಕಾರ ಬಹಳ ದಿನ ಉಳಿಯುವುದಿಲ್ಲ’ ಎಂದರು.
ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್ಪಾಲ್ ಸುವರ್ಣ ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ…
ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್ ಜನತಾ ಪಾರ್ಟಿ…
ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…
ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…
ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ತಯಾರಿಸಿ ರೈತರಿಗೆ ಮಾರಾಟ : ಕೃಷಿ ಅಧಿಕಾರಿಗಳ ದಾಳಿ ಚಿಕ್ಕಬಳ್ಳಾಪುರ: ಪ್ರತಿಷ್ಠಿತ ಕಂಪನಿಗಳ…
ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಾಲು…