ರಾಜ್ಯ ನ್ಯೂಸ್

ಕಾಂಗ್ರೆಸ್‌–ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ಇರುವವರನ್ನು ಮಲಗಲು ಬಿಡುವುದಿಲ್ಲ : ಶ್ರೀರಾಮುಲು

 ‘ಬಿ.ಎಸ್‌. ಯಡಿಯೂರಪ್ಪ ಅವರ ರಾಜೀನಾಮೆಯಿಂದ ನಾವೇನೂ ಕಂಗೆಟ್ಟಿಲ್ಲ; ಆದರೆ, ಕಾಂಗ್ರೆಸ್‌–ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ಇರುವವರನ್ನು ಮಲಗಲು ಬಿಡುವುದಿಲ್ಲ’ ಎಂದು ಶಾಸಕ ಬಿ. ಶ್ರೀರಾಮುಲು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಹುಮತ ಸಾಬೀತುಪಡಿಸಲು ಬಿಜೆಪಿಗೆ ಅವಕಾಶ ಮಾಡಿಕೊಡದೇ ಗೆದ್ದಿದ್ದಾಗಿ ಅವರು ಬೀಗುತ್ತಿದ್ದಾರೆ. ಆ ಎರಡೂ ಪಕ್ಷಗಳು ಹಿಂದಿನ ಚುನಾವಣೆಗಿಂತ ಕಡಿಮೆ ಸ್ಥಾನಗಳನ್ನು ಪಡೆದಿದ್ದು, ಜನ ಅವರನ್ನು ತಿರಸ್ಕರಿಸಿದ್ದಾರೆ ಎಂಬುದನ್ನು ಮರೆಯಬಾರದು’ಎಂದರು.

‘ಭ್ರಷ್ಟಾಚಾರ ನಡೆಸಲು ಕಾಂಗ್ರೆಸ್‌ನವರು ಲೋಕಾಯುಕ್ತ ಸಂಸ್ಥೆಯ ಹಲ್ಲು ಮುರಿದಿದ್ದಾರೆ. ಮೈತ್ರಿ ಸರ್ಕಾರದ ಹೆಸರಿನಲ್ಲಿ ಈಗಲೂ ಭ್ರಷ್ಟಾಚಾರ ಮುಂದುವರಿಸಬಹುದು ಎಂದು ಭಾವಿಸಿದ್ದಾರೆ. ಆದರೆ, 104 ಸದಸ್ಯ ಬಲದ ಬಿಜೆಪಿ ಪ್ರಬಲ ಪ್ರತಿಪಕ್ಷವಾಗಿ ವಿಧಾನಸಭೆಯಲ್ಲಿ ಕೆಲಸ ನಿರ್ವಹಿಸಲಿದೆ. ಅವರ ಪ್ರತಿಯೊಂದು ಅಕ್ರಮವನ್ನೂ ಬಯಲಿಗೆಳೆಯಲಿದೆ. ದಿನದ 24 ತಾಸೂ ಅವರ ಕೆಲಸದ ಮೇಲೆ ನಿಗಾ ಇಡುತ್ತೇವೆ’ ಎಂದರು.

‘ಬಿಜೆಪಿ ಅಧಿಕಾರಕ್ಕೆ ಬಂದರೆ ಜೈಲಿಗೆ ಹೋಗಬೇಕಾಗುತ್ತದೆ ಎಂಬ ಭಯದಿಂದ ಕಾಂಗ್ರೆಸ್‌– ಜೆಡಿಎಸ್‌ ಹೊಂದಾಣಿಕೆ ಮಾಡಿಕೊಂಡಿವೆ. ಈ ಮೈತ್ರಿ ಸರ್ಕಾರ ಬಹಳ ದಿನ ಉಳಿಯುವುದಿಲ್ಲ’ ಎಂದರು.

 

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

12 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

16 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

16 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

16 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

17 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

17 hours ago