ಬೆಂಗಳೂರು: ನೆರೆ ಸಂತ್ರಸ್ತರಿಗೆ ಪರಿಹಾರ ವಿಳಂಬ ಖಂಡಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಪ್ರತಿಭಟನೆಗೆ ಮುಂದಾಗಿರುವ ಕಾಂಗ್ರೆಸ್ ನಾಯಕರ ವಿರುದ್ಧ ರಾಜ್ಯ ಸರ್ಕಾರದ ಸಚಿವರಾದ ಸಿ.ಟಿ.ರವಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಕಾಂಗ್ರೆಸ್ ನಾಯಕರು ಪ್ರತಿಭಟನೆ ಮಾಡುವ ಬದಲು ಪ್ರವಾಹ ಪೀಡಿತ ಪ್ರದೇಶಗಳ 10 ಗ್ರಾಮಗಳನ್ನು ದತ್ತು ಪಡೆಯಲಿ ಎಂದು ತಿರುಗೇಟು ನೀಡಿದರು.
ರಾಜ್ಯ ಸರ್ಕಾರದ ಅಧಿಕಾರಿಗಳು ನೆರೆ ಪರಿಹಾರ ವಿಚಾರವಾಗಿಯೇ ದೆಹಲಿಗೆ ತೆರಳಿದ್ದು, ಶೀಘ್ರದಲ್ಲೇ ಪರಿಹಾರ ಧನ ಬಿಡುಗಡೆಯಾಗುತ್ತದೆ. ಪ್ರಧಾನಿ ಮೋದಿ ಅವರು ಎಂದೂ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಅಥವಾ ಪಕ್ಷಪಾತ ಮಾಡುವುದಿಲ್ಲ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ನೆರೆ ಸಂತ್ರಸ್ತರಿಗೆ ತಲಾ 3,600 ರು. ಪರಿಹಾರ ನೀಡಲಾಗಿತ್ತು. ಈಗ ನಮ್ಮ ಸರ್ಕಾರ ತಲಾ 10 ಸಾವಿರ ರು. ಪರಿಹಾರ ನೀಡಿದ್ದೇವೆ ಎಂದರು.
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…
ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಹಲ್ಲೆ ಪ್ರಕರಣ: ಆರೋಪಿ ವೈದ್ಯನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿ, ಡಿಎಚ್ಓಗೆ ಮನವಿ ಉಡುಪಿ: ಉಡುಪಿ…
ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಜನರೇಟರ್ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿ; ಕೆಲಕಾಲ ಸಂಚಾರ ಅಸ್ತವ್ಯಸ್ತ ಮೂಡುಬಿದಿರೆ: ಜನರೇಟರ್ ಸಾಗಿಸುತ್ತಿದ್ದ…
ವೆನ್ಲಾಕ್ ಆಸ್ಪತ್ರೆ ಉನ್ನತೀಕರಣಕ್ಕೆ ಸರಕಾರದಿಂದ 70 ಕೋಟಿ ರೂ.ಅನುದಾನ : ಸಚಿವ ಯು.ಟಿ.ಖಾದರ್ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ…