Featured

ಕಾಂಗ್ರೆಸ್‌ ಪಕ್ಷದ ಕಚೇರಿಯೇ ದೇವಸ್ಥಾನ, ಅಲ್ಲಿಯೇ ಇನ್ನೂ ಮುಂದೆ ಎಲ್ಲ ಚಟುವಟಿಕೆ ನಡೆಯಬೇಕು : ಡಿ.ಕೆ.ಶಿ -Vishwanews24

ಕಾಂಗ್ರೆಸ್‌ ಪಕ್ಷದ ಕಚೇರಿಯೇ ದೇವಸ್ಥಾನ, ಅಲ್ಲಿಯೇ ಇನ್ನೂ ಮುಂದೆ ಎಲ್ಲ ಚಟುವಟಿಕೆ ನಡೆಯಬೇಕು : ಡಿ.ಕೆ.ಶಿ -Vishwanews24

ಕಲಬುರಗಿ: ನನಗೆ ಎಷ್ಟು ತೊಂದರೆ ಕೊಟ್ಟರೂ ಹೆದರಲ್ಲ. ನಿಮ್ಮ ಆಶೀರ್ವಾದ ಇದ್ದರೆ ಸಾಕು ಕೇಂದ್ರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ನಗರದಲ್ಲಿ ನಡೆದ ಕಾಂಗ್ರೆಸ್‌ ಪಕ್ಷದ ಕಲಬುರಗಿ ವಿಭಾಗ ಮಟ್ಟದ ಸಂಕಲ್ಪ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಸ್ವಾತಂತ್ರ್ಯ ನಂತರ ಭಾರೀ ಹೋರಾಟ ಕೃಷಿ ಕಾಯ್ದೆಯ ವಿರುದ್ಧ ನಡೆಯುತ್ತಿದೆ. ನಾನು ಮತ್ತು ನಮ್ಮ ಪಕ್ಷದ ಹಿರಿಯ ನಾಯಕರು ಈ ಮೂರು ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತೇವೆ ಎಂದು ಡಿಕೆಶಿ ಹೇಳಿದರು.

ಕಾಂಗ್ರೆಸ್‌ ಪಕ್ಷದ ಕಚೇರಿಯೇ ದೇವಸ್ಥಾನ. ಅಲ್ಲಿಯೇ ಇನ್ನೂ ಮುಂದೆ ಎಲ್ಲ ಚಟುವಟಿಕೆ ನಡೆಯಬೇಕು. ನಾಯಕರ ಮನೆಗಳಲ್ಲಿ ಅಲ್ಲ. ಎಲ್ಲರೂ ಒಗ್ಗಟ್ಟಿನಿಂದ ಮುಂಬರುವ ಚುನಾವಣೆ ಎದುರಿಸೋಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಕರೆ ನೀಡಿದರು. ಜಿಲ್ಲೆಯ ಎಲ್ಲ ತಾಲೂಕು ಮಟ್ಟದ ಕಚೇರಿಗಳನ್ನು ಕಟ್ಟಡದಲ್ಲಿ ನಡೆಸಿ ಸ್ವಂತ ಕಟ್ಟಡವಿಲ್ಲದಿದ್ದರೆ ಬಾಡಿಗೆ ಕಟ್ಟಡದಲ್ಲಿ ನಡೆಸಿ ಪಕ್ಷಕ್ಕೆ ಸಂಬಂಧಿಸಿದ ಚರ್ಚೆಗಳನ್ನು ಅಲ್ಲಿಯೇ ನಡೆಸಿ ಎಂದು ಹೇಳಿದರು.

ಬ್ಲಾಕ್‌ ಮಟ್ಟದಲ್ಲಿ ಪದಾಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ ಆಕಾಂಕ್ಷಿಗಳ ಪಟ್ಟಿಯನ್ನು ಸಿದ್ದಪಡಿಸಿ ನನಗೆ ಕಳಿಸಿ. ನಾನು ನೇಮಕ ಮಾಡಿ ಆದೇಶ ಹೊರಡಿಸುತ್ತೇನೆ. ನನ್ನ ಗಮನಕ್ಕೆ ಬರದೇ ಮಾಡಲಾದ ನೇಮಕಾತಿಗಳಿಗೆ ಮಾನ್ಯತೆ ಇಲ್ಲ. ನಾನು ಅಂತಹ ನೇಮಕಾತಿಗಳನ್ನು ರದ್ದುಪಡಿಸುತ್ತೇನೆ ಎಂದರು. ಇನ್ನು ಇಂದಿನ ಸಭೆಯಲ್ಲಿ ಭಾಗವಹಿಸಿರುವವರು ಒಳ್ಳೆಯ ಸಲಹೆ ನೀಡಿದ್ದೀರಿ. ಕೊಪ್ಪಳ ಅಧ್ಯಕ್ಷರು ಧರ್ಮದ ವಿಚಾರದಲ್ಲಿ ಸಲಹೆ ನೀಡಿದ್ದಾರೆ. ನಮಗೆ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್‌ ಸೇರಿದಂತೆ ಎಲ್ಲ ಧರ್ಮಗಳು ಸಮ. ಆದರೆ, ಬಿಜೆಪಿಯವರು ನಾವೆಲ್ಲ ಹಿಂದೂ, ಹಿಂದೂ ಮುಂದು ಎನ್ನುತ್ತಾರೆ. ನಮಗೆ ಎಲ್ಲ ಧರ್ಮಗಳಲ್ಲಿ ನಂಬಿಕೆಯಿದೆ ಎಂದರು.

ಇನ್ನೂ 10ವರ್ಷ ಪ್ರಧಾನಿ ಮೋದಿಯವರ ಆಡಳಿತ ಈ ದೇಶಕ್ಕೆ ಅವಶ್ಯಕವಾಗಿದೆ : ಸಚಿವ ಸೋಮಣ್ಣ -Vishwanews24

 

 

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

7 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago