ಕಾಂಗ್ರೆಸ್‌ ಪಕ್ಷವು ‍ಇಡೀ ದೇಶದಲ್ಲಿ ಕುಸಿಯುತ್ತಿದೆ : ಅಮಿತ್‌ ಶಾ -Vishwanews24

Featured, ರಾಷ್ಟ್ರ ನ್ಯೂಸ್

ಕಾಂಗ್ರೆಸ್‌ ಪಕ್ಷವು ‍ಇಡೀ ದೇಶದಲ್ಲಿ ಕುಸಿಯುತ್ತಿದೆ : ಅಮಿತ್‌ ಶಾ -Vishwanews24

ಚೆನ್ನೈ : ಕಾಂಗ್ರೆಸ್‌ನ ಹಿರಿಯ ಮುಖಂಡರೆಲ್ಲ ಬಿಜೆಪಿ ಸೇರುತ್ತಿದ್ದಾರೆ. ವಂಶಾಡಳಿತ ಮತ್ತು ಒಂದು ಕುಟುಂಬದಿಂದಾಗಿ ಕಾಂಗ್ರೆಸ್‌ ಪಕ್ಷವು ‍ಪುದುಚೇರಿಯಲ್ಲಿ ಮಾತ್ರವಲ್ಲ, ಇಡೀ ದೇಶದಲ್ಲಿ ಕುಸಿಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭಾನುವಾರ ಹೇಳಿದ್ದಾರೆ.

ಬದುಕಿನ‌ ಕೊನೆ ಉಸಿರಿರುವವರೆಗೆ ರಾಜ್ಯದ ಹಾಗೂ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶಕ್ತಿಮೀರಿ ದುಡಿಯುತ್ತೇನೆ : ಸಿಎಂ BSY -Vishwanews24

ತಮಿಳುನಾಡಿನ ವಿಲ್ಲುಪುರಂನಲ್ಲಿಯೂ ಶಾ ಅವರು ವಂಶಾಡಳಿತದ ವಿಚಾರವನ್ನೇ ಪ್ರಸ್ತಾಪಿಸಿದರು. ‘ಡಿಎಂಕೆ ಮತ್ತು ಕಾಂಗ್ರೆಸ್‌ ನಾಯಕರು ತಮ್ಮ ಕುಟುಂಬಗಳ ಬಗ್ಗೆಯಷ್ಟೇ ಯೋಚಿಸುತ್ತಾರೆ. ಮಗ ರಾಹುಲ್‌ ಗಾಂಧಿಯನ್ನು ಪ್ರಧಾನಿ ಮಾಡುವುದಷ್ಟೇ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಬೇಕಾಗಿದೆ. ಮಗ ಉದಯನಿಧಿಯನ್ನು ಮುಖ್ಯಮಂತ್ರಿ ಮಾಡುವುದು ಡಿಎಂಕೆ ಮುಖ್ಯಸ್ಥ ಸ್ಟಾಲಿನ್‌ ಬಯಕೆ’ ಎಂದು ಶಾ ಹೇಳಿದ್ದಾರೆ.

ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರವು ಎಲ್ಲ ವರ್ಗದವರಿಗೂ ನ್ಯಾಯ ಕಲ್ಪಿಸುವ ಕೆಲಸ ಮಾಡಲಿ : ವಿನಯ್‌ ಗುರೂಜಿ -Vishwanews24

ಮೀನುಗಾರಿಕಗೆ ಪ್ರತ್ಯೇಕ ಸಚಿವಾಲಯ ಇಲ್ಲ ಎಂದು ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅವರು ಇತ್ತೀಚೆಗೆ ಹೇಳಿದ್ದನ್ನೂ ಶಾ ಅವರು ಲೇವಡಿ ಮಾಡಿದರು. ‘ಕೆಲ ದಿನಗಳ ಹಿಂದೆ ಇಲ್ಲಿಗೆ ಬಂದಿದ್ದ ರಾಹುಲ್ ಅವರು ಕೇಂದ್ರದಲ್ಲಿ ಮೀನುಗಾರಿಕೆಗೆ ಪ್ರತ್ಯೇಕ ಸಚಿವಾಲಯ ಏಕಿಲ್ಲ ಎಂದು ಪ್ರಶ್ನಿಸಿದ್ದರು. ರಾಹುಲ್‌ ಅವರೇ, ನೀವು ಆಗ ರಜೆಯಲ್ಲಿದ್ದೀರಿ. ಮೋದಿ ಅವರು 2019ರಲ್ಲಿಯೇ ಎರಡು ಪ್ರತ್ಯೇಕ ಇಲಾಖೆಗಳನ್ನು ಸ್ಥಾಪಿಸಿದ್ದಾರೆ. ಅದು ನಿಮ್ಮ ಅರಿವಿಗೆ ಬಂದಿಲ್ಲ’ ಎಂದರು.

ಚಿತ್ರೀಕರಣದ ವೇಳೆ ಪೆಟ್ರೋಲ್ ಬಾಂಬ್ ಸಿಡಿದು ಬೆಂಕಿ ಅವಘಡ ; ನಟ ರಿಷಬ್ ಶೆಟ್ಟಿಗೆ ಗಾಯ; ಅಪಾಯದಿಂದ ಪಾರು -Vishwanews24