ಚೆನ್ನೈ : ಕಾಂಗ್ರೆಸ್ನ ಹಿರಿಯ ಮುಖಂಡರೆಲ್ಲ ಬಿಜೆಪಿ ಸೇರುತ್ತಿದ್ದಾರೆ. ವಂಶಾಡಳಿತ ಮತ್ತು ಒಂದು ಕುಟುಂಬದಿಂದಾಗಿ ಕಾಂಗ್ರೆಸ್ ಪಕ್ಷವು ಪುದುಚೇರಿಯಲ್ಲಿ ಮಾತ್ರವಲ್ಲ, ಇಡೀ ದೇಶದಲ್ಲಿ ಕುಸಿಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ.
ತಮಿಳುನಾಡಿನ ವಿಲ್ಲುಪುರಂನಲ್ಲಿಯೂ ಶಾ ಅವರು ವಂಶಾಡಳಿತದ ವಿಚಾರವನ್ನೇ ಪ್ರಸ್ತಾಪಿಸಿದರು. ‘ಡಿಎಂಕೆ ಮತ್ತು ಕಾಂಗ್ರೆಸ್ ನಾಯಕರು ತಮ್ಮ ಕುಟುಂಬಗಳ ಬಗ್ಗೆಯಷ್ಟೇ ಯೋಚಿಸುತ್ತಾರೆ. ಮಗ ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡುವುದಷ್ಟೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಬೇಕಾಗಿದೆ. ಮಗ ಉದಯನಿಧಿಯನ್ನು ಮುಖ್ಯಮಂತ್ರಿ ಮಾಡುವುದು ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಬಯಕೆ’ ಎಂದು ಶಾ ಹೇಳಿದ್ದಾರೆ.
ಮೀನುಗಾರಿಕಗೆ ಪ್ರತ್ಯೇಕ ಸಚಿವಾಲಯ ಇಲ್ಲ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಇತ್ತೀಚೆಗೆ ಹೇಳಿದ್ದನ್ನೂ ಶಾ ಅವರು ಲೇವಡಿ ಮಾಡಿದರು. ‘ಕೆಲ ದಿನಗಳ ಹಿಂದೆ ಇಲ್ಲಿಗೆ ಬಂದಿದ್ದ ರಾಹುಲ್ ಅವರು ಕೇಂದ್ರದಲ್ಲಿ ಮೀನುಗಾರಿಕೆಗೆ ಪ್ರತ್ಯೇಕ ಸಚಿವಾಲಯ ಏಕಿಲ್ಲ ಎಂದು ಪ್ರಶ್ನಿಸಿದ್ದರು. ರಾಹುಲ್ ಅವರೇ, ನೀವು ಆಗ ರಜೆಯಲ್ಲಿದ್ದೀರಿ. ಮೋದಿ ಅವರು 2019ರಲ್ಲಿಯೇ ಎರಡು ಪ್ರತ್ಯೇಕ ಇಲಾಖೆಗಳನ್ನು ಸ್ಥಾಪಿಸಿದ್ದಾರೆ. ಅದು ನಿಮ್ಮ ಅರಿವಿಗೆ ಬಂದಿಲ್ಲ’ ಎಂದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…