ನವದೆಹಲಿ : “ಕಾಂಗ್ರೆಸ್ ಪಕ್ಷ ಒಂದು ದೊಡ್ಡ ಹಡಗಿದ್ದಂತೆ. ಅದು ಉಳಿದರೆ ಅನೇಕ ಜನರ ಆಕಾಂಕ್ಷೆ, ಮಹಾತ್ಮ ಗಾಂಧಿಯವರ ಏಕತೆ, ಭಗತ್ ಸಿಂಗ್ ಅವರ ಧೈರ್ಯ ಹಾಗೂ ಬಿ ಆರ್ ಅಂಬೇಡ್ಕರ್ ಅವರ ಸಮಾನತೆಯ ನೀತಿಗಳು ರಕ್ಷಣೆಯಾಗುತ್ತವೆ” ಎಂದು ಕನ್ನಯ್ಯ ಕುಮಾರ್ ಹೇಳಿದ್ಧಾರೆ.
“ಕಾಂಗ್ರೆಸ್ ಪಕ್ಷಕ್ಕೆ ನಾನು ಸೇರ್ಪಡೆಯಾಗುತ್ತಿದ್ದೇನೆ. ಏಕೆಂದರೆ, ಇದು ಕೇವಲ ಪಕ್ಷವಲ್ಲ ಇಂದು ಒಂದು ಕಲ್ಪನೆ. ಕಾಂಗ್ರೆಸ್ ದೇಶ ಕಂಡ ಹಳೆಯ ಹಾಗೂ ಅತ್ಯಂತ ಪ್ರಜಾಸತ್ತಾತ್ಮಕ ಪಕ್ಷ. ನಾನು ಪ್ರಜಾಪ್ರಭುತ್ವಕ್ಕೆ ಒತ್ತು ನೀಡುತ್ತೇನೆ. ಕಾಂಗ್ರೆಸ್ ಪಕ್ಷ ಇಲ್ಲದೇ ಇದ್ದಲ್ಲಿ ನಾನು ಮಾತ್ರವೇ ಅಲ್ಲ, ದೇಶವೂ ಉಳಿಯಲು ಸಾಧ್ಯವಿಲ್ಲ” ಎಂದಿದ್ದಾರೆ.
“ಬಿಜೆಪಿಯ ನಿರ್ದಿಷ್ಟ ಸಿದ್ದಾಂತಗಳು ಭಾರತದ ಮೌಲ್ಯಗಳು ಸೇರಿದಂತೆ ಸಂಸ್ಕೃತಿ, ಇತಿಹಾಸ ಹಾಗೂ ಭವಿಷ್ಯವನ್ನು ಹಾಳು ಮಾಡಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಉಳಿಯದೇ ಇದ್ದರೆ ದೇಶ ಉಳಿಯಲು ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.
“ಪ್ರಜಾಪ್ರಭುತ್ವದ ಕುರಿತು ನಾನು ಒಲವು ಹೊಂದಿದ್ದೇನೆ. ಕಾಂಗ್ರೆಸ್ ಒಂದು ದೊಡ್ಡ ಹಡಗು ಇದ್ದಂತೆ. ಅದು ಉಳಿದರೆ ಮಾತ್ರವೇ ಅನೇಕ ಜನರ ಆಕಾಂಕ್ಷೆ ಉಳಿಯುತ್ತದೆ. ಹಾಗಾಗಿ ನಾನು ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದೇನೆ” ಎಂದಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಕ್ಷೇತ್ರಗಳಲ್ಲಿ ಸ್ಥಾನ ಮೀಸಲು: ಕುಮಾರಸ್ವಾಮಿ -Vishwanews24
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…