Featured

ಕಾಂಗ್ರೆಸ್‌ ಮತ್ತು ಜೆಡಿಎಸ್ ಬಡವರು, ಹಾಗೂ ರೈತರ ಪರವಾಗಿ ಕೆಲಸ ಮಾಡುತ್ತಿದೆ ;ನಾವು ದೇಶವನ್ನು ಒಗ್ಗೂಡಿಸುತ್ತೇವೆ : ರಾಹುಲ್‌ ಗಾಂಧಿ

ಬೆಂಗಳೂರುದೇಶಕ್ಕೆ ಏನೂ ಮಾಡದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿಯನ್ನು ಸೋಲಿಸುವುದೇ ನಮ್ಮ ಮುಖ್ಯ ಗುರಿಯಾಗಬೇಕು ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಕರೆ ನೀಡಿದ್ದಾರೆ.

ಬೆಂಗಳೂರಿನ ಹೊರವಲಯದ ಮಾದವಾರದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಪಕ್ಷಗಳು ಬೃಹತ್ ಪರಿವರ್ತನಾ ಸಮಾವೇಶದಲ್ಲಿ ರಾಹುಲ್‌ ಗಾಂಧಿ ತಿಳಿಸಿದರು.

ಕಾಂಗ್ರೆಸ್‌ ಮತ್ತು ಜೆಡಿಎಸ್ ಕಾರ್ಯಕರ್ತರು ಈಗ ಒಟ್ಟಗಿ ಕೆಲಸ ಮಾಡಬೇಕು. ಜೆಡಿಎಸ್‌ ಅಭ್ಯರ್ಥಿ ಇದ್ದ ಕಡೆ ಕಾಂಗ್ರೆಸ್‌ ಕಾರ್ಯಕರ್ತರು, ಅದೇ ರೀತಿ ಕಾಂಗ್ರೆಸ್‌ ಅಭ್ಯರ್ಥಿ ಇದ್ದ ಕಡೆ ಜೆಡಿಎಸ್‌ ಕಾರ್ಯಕರ್ತರು ಪ್ರಚಾರ ಮಾಡಿ ಗೆಲ್ಲಿಸಬೇಕು ಎಂದು ಕರೆ ನೀಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಒಡೆಯುವ ಕೆಲಸ ಮಾಡಿದರು. ಆದರೆ ನಾವು ದೇಶವನ್ನು ಒಟ್ಟುಗೂಡಿಸುವ ಕೆಲವ ಮಾಡುತ್ತೇವೆ ಎಂದು ಘೋಷಿಸಿದವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ. ಕೇಂದ್ರ ಸರ್ಕಾರ ದೇಶದ ಜನರಲ್ಲಿ ಒಡಕನ್ನು ಉಂಟು ಮಾಡುವ ಕೆಲಸ ಮಾಡುತ್ತಿದೆ. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶದವರನ್ನು ಒಟ್ಟುಗೂಡಿಸುವ ಕೆಲಸ ಮಾಡಲಿದೆ ಎಂದರು..

ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಮಾತನಾಡಿ, ಈ ಸಮಾವೇಶದ ಮೂಲಕ ದೇಶಕ್ಕೆ ಮೈತ್ರಿ ಕೂಟದ ಬಗ್ಗೆ ಸ್ಪಷ್ಟ ಸಂದೇಶ ರವಾನೆಯಾಗಬೇಕು ಎಂದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿ, ದೇಶದ ರಾಜಕಾರಣದಲ್ಲಿ ಬದಲಾವಣೆ ಅನಿವಾರ್ಯವಾಗಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ ಕಾಂಗ್ರೆಸ್-ಜೆಡಿಎಸ್ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ದೇಶದ ರಾಜಕಾರಣದ ಬದಲಾವಣೆಗೆ ಸಾಕ್ಷಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು

ಈ ಸಂದರ್ಭ ಮಾತನಾಡಿದ ಸಿದ್ದರಾಮಯ್ಯ, ರಾಹುಲ್ ಗಾಂಧಿ ಸೂಚನೆ ಮೇರೆಗೆ 2 ಪಕ್ಷಗಳ ಜಂಟಿ ಸಮಾವೇಶ ಆಯೋಜಿಸಿದ್ದು, ದೇಶಕ್ಕೆ ಬದಲಾವಣೆಯ ಸಂದೇಶ ನೀಡುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಸಿದ್ದರಾಮಯ್ಯ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ್ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸೇರಿದಂತೆ ಹಲವಾರು ನಾಯಕರು ಪರಿವರ್ತನಾ ಸಮಾವೇಶದಲ್ಲಿ ಭಾಗಿಯಾಗಿದ್ದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

9 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

9 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

10 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

11 hours ago