ಬೆಂಗಳೂರು: ದೇಶಕ್ಕೆ ಏನೂ ಮಾಡದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿಯನ್ನು ಸೋಲಿಸುವುದೇ ನಮ್ಮ ಮುಖ್ಯ ಗುರಿಯಾಗಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕರೆ ನೀಡಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಈಗ ಒಟ್ಟಗಿ ಕೆಲಸ ಮಾಡಬೇಕು. ಜೆಡಿಎಸ್ ಅಭ್ಯರ್ಥಿ ಇದ್ದ ಕಡೆ ಕಾಂಗ್ರೆಸ್ ಕಾರ್ಯಕರ್ತರು, ಅದೇ ರೀತಿ ಕಾಂಗ್ರೆಸ್ ಅಭ್ಯರ್ಥಿ ಇದ್ದ ಕಡೆ ಜೆಡಿಎಸ್ ಕಾರ್ಯಕರ್ತರು ಪ್ರಚಾರ ಮಾಡಿ ಗೆಲ್ಲಿಸಬೇಕು ಎಂದು ಕರೆ ನೀಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಒಡೆಯುವ ಕೆಲಸ ಮಾಡಿದರು. ಆದರೆ ನಾವು ದೇಶವನ್ನು ಒಟ್ಟುಗೂಡಿಸುವ ಕೆಲವ ಮಾಡುತ್ತೇವೆ ಎಂದು ಘೋಷಿಸಿದವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ. ಕೇಂದ್ರ ಸರ್ಕಾರ ದೇಶದ ಜನರಲ್ಲಿ ಒಡಕನ್ನು ಉಂಟು ಮಾಡುವ ಕೆಲಸ ಮಾಡುತ್ತಿದೆ. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶದವರನ್ನು ಒಟ್ಟುಗೂಡಿಸುವ ಕೆಲಸ ಮಾಡಲಿದೆ ಎಂದರು..
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಮಾತನಾಡಿ, ಈ ಸಮಾವೇಶದ ಮೂಲಕ ದೇಶಕ್ಕೆ ಮೈತ್ರಿ ಕೂಟದ ಬಗ್ಗೆ ಸ್ಪಷ್ಟ ಸಂದೇಶ ರವಾನೆಯಾಗಬೇಕು ಎಂದರು.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿ, ದೇಶದ ರಾಜಕಾರಣದಲ್ಲಿ ಬದಲಾವಣೆ ಅನಿವಾರ್ಯವಾಗಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ ಕಾಂಗ್ರೆಸ್-ಜೆಡಿಎಸ್ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ದೇಶದ ರಾಜಕಾರಣದ ಬದಲಾವಣೆಗೆ ಸಾಕ್ಷಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು
ಈ ಸಂದರ್ಭ ಮಾತನಾಡಿದ ಸಿದ್ದರಾಮಯ್ಯ, ರಾಹುಲ್ ಗಾಂಧಿ ಸೂಚನೆ ಮೇರೆಗೆ 2 ಪಕ್ಷಗಳ ಜಂಟಿ ಸಮಾವೇಶ ಆಯೋಜಿಸಿದ್ದು, ದೇಶಕ್ಕೆ ಬದಲಾವಣೆಯ ಸಂದೇಶ ನೀಡುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ, ಸಿದ್ದರಾಮಯ್ಯ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ್ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸೇರಿದಂತೆ ಹಲವಾರು ನಾಯಕರು ಪರಿವರ್ತನಾ ಸಮಾವೇಶದಲ್ಲಿ ಭಾಗಿಯಾಗಿದ್ದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…